'ಹೊಯ್ಸಳ' ವಾಹನ 
ರಾಜ್ಯ

ಬೆಂಗಳೂರು: ಹೊಯ್ಸಳ ಪೊಲೀಸರು ಅಂಗಡಿಗಳಲ್ಲಿ ಲಂಚ ಕೇಳುತ್ತಿರುವ ವಿಡಿಯೋ ವೈರಲ್!

ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಅಂಗಡಿ ಮಾಲೀಕರಿಂದ ಲಂಚ ಪಡೆಯುತ್ತಿದ್ದ ವೇಳೆ ಸಾರ್ವಜನಿಕರು ಅದನ್ನು ವಿಡಿಯೋ ಮಾಡಿದ್ದಾರೆ.

ಬೆಂಗಳೂರು: ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಅಂಗಡಿ ಮಾಲೀಕರಿಂದ ಲಂಚ ಪಡೆಯುತ್ತಿದ್ದ ವೇಳೆ ಸಾರ್ವಜನಿಕರು ಅದನ್ನು ವಿಡಿಯೋ ಮಾಡಿದ್ದು, ಇದನ್ನು ಗಮನಿಸಿದ ಪೊಲೀಸರು ತಕ್ಷಣ ಅಲ್ಲಿಂದ ವೇಗವಾಗಿ ಜಾಗ ಖಾಲಿ ಮಾಡಿದ್ದಾರೆ. ಈ ವೇಳೆ ಸ್ವಲ್ಪ ದೂರದವರೆಗೆ ಸಾರ್ವಜನಿಕರು ಪೊಲೀಸ್ ವಾಹನವನ್ನು ಬೆನ್ನಟ್ಟಿದ ಘಟನೆ ರಾಜಗೋಪಾಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೀಣ್ಯ ಎರಡನೇ ಹಂತದ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೊಯ್ಸಳ ವಾಹನದ ಸಿಬ್ಬಂದಿ ಅಂಗಡಿಯವರಿಂದ ಹಣ ವಸೂಲಿ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಲು ಪ್ರಾರಂಭಿಸಿದ ನಂತರ ವೇಗವಾಗಿ ಓಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ವ್ಯಕ್ತಿ ಗಸ್ತು ವ್ಯಾನ್ ಹತ್ತಿರ ಬರುತ್ತಿದ್ದಂತೆ, ವಾಹನದ ಚಾಲಕ ಆತುರಾತುರವಾಗಿ ಘಟನಾ ಸ್ಥಳದಿಂದ ದೂರ ಹೋಗುತ್ತಾನೆ. ಅಲ್ಲದೆ ವಿಡಿಯೋ ರೆಕಾರ್ಡ್ ಮಾಡುವ ವ್ಯಕ್ತಿಯು ಸ್ವಲ್ಪ ದೂರದವರೆಗೆ ವಾಹನವನ್ನು ಬೆನ್ನತ್ತಿ ಹೋಗುತ್ತಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ ಮತ್ತು ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಉಪ ಆಯುಕ್ತ(ಉತ್ತರ) ಸೈದುಲು ಅದಾವತ್ ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹೊಯ್ಸಳ ಗಸ್ತು ತಿರುಗುವ ವಾಹನಗಳನ್ನು ಸಹಾಯಕ ಸಬ್-ಇನ್‌ಸ್ಪೆಕ್ಟರ್ (ASI) ಮತ್ತು ಕಾನ್ಸ್‌ಟೇಬಲ್ ನಿರ್ವಹಿಸುತ್ತಿದ್ದು, ಅವರು ಬಾಡಿ ಕ್ಯಾಮೆರಾಗಳು ಮತ್ತು ವಾಹನದಲ್ಲಿ ಮೊಬೈಲ್ ಡೇಟಾ ಟರ್ಮಿನೇಷನ್ (MDT) ನಿರ್ವಹಿಸುತ್ತಾರೆ. ಈ ಹಿಂದೆ ಈ ವಾಹನಗಳಿಗೆ ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್ ಮುಖ್ಯಸ್ಥರಾಗಿರುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT