ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಅಪಘಾತದಲ್ಲಿ ಕಾಲು ಕಳೆದುಕೊಂಡ ಯುವಕ, ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ!

ಬೈಕ್‌ನಿಂದ ಕೆಳಗೆ ಬಿದ್ದ ಯುವಕನ ಮೈಮೇಲೆ ಟಿಪ್ಪರ್ ಹರಿದು ಕಾಲು ಕಳೆದುಕೊಂಡ ಘಟನೆ ಗದಗ ಜಿಲ್ಲೆ ಮಲ್ಲಸಮುದ್ರ ಗ್ರಾಮದ ಬಳಿ ನಡೆದಿದೆ.

ಗದಗ: ಬೈಕ್‌ನಿಂದ ಕೆಳಗೆ ಬಿದ್ದ ಯುವಕನ ಮೈಮೇಲೆ ಟಿಪ್ಪರ್ ಹರಿದು ಕಾಲು ಕಳೆದುಕೊಂಡ ಘಟನೆ ಗದಗ ಜಿಲ್ಲೆ ಮಲ್ಲಸಮುದ್ರ ಗ್ರಾಮದ ಬಳಿ ನಡೆದಿದೆ. ಬೈಕ್ ಸಾವರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಒದ್ದಾಡುತ್ತಿದ್ದರೂ ಜನ ಆತನನ್ನು ಆಸ್ಪತ್ರೆಗೆ ದಾಖಲಿಸದೆ ಮಾನವೀಯತೆ ಮರೆತು ವಿಡಿಯೋ ಮಾಡಿದ್ದಾರೆ.

ಅಪಘಾತದಲ್ಲಿ ಕಾಲು ಕಳೆದುಕೊಂಡ ವಿನಾಯಕ ಹುಡೇದ್(23) ನೋವಿನಿಂದ ರಸ್ತೆಯಲ್ಲೇ ಒದ್ದಾಡುತ್ತಿದ್ದರು. ರಕ್ತ ಸೋರುತ್ತಿದ್ದ ಕಾಲಿಗೆ ತಾವೇ ಕರ್ಚೀಫ್ ಕಟ್ಟಿಕೊಂಡಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಜನ ಆ ಯುವಕನಿಗೆ ಸಹಾಯ ಮಾಡುವ ಬದಲು, ಆತನ ಕಷ್ಟವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದರು ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ಪ್ರಾರಂಭಿಸಿದರು.

ಕೊನೆಗೆ 20 ನಿಮಿಷಗಳ ನಂತರ ಮತ್ತೊಬ್ಬ ಯುವಕ ಆತನ ಸಹಾಯಕ್ಕೆ ಬಂದಿದ್ದು, ಕೆಲ ಗ್ರಾಮಸ್ಥರು ಆತನನ್ನು ಖಾಸಗಿ ವಾಹನದಲ್ಲಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಹರ್ತಿ ಗ್ರಾಮದ ಹುಡೇದ್ ಮತ್ತು ಮಂಜುನಾಥ ಸಂಶಿ ಅವರು ಮಲ್ಲಸಮುದ್ರ ಬಳಿಯ ಆರ್‌ಟಿಒಗೆ ತೆರಳಿದ ವೇಳೆ ಈ ಅಪಘಾತ ಸಂಭವಿಸಿದೆ. ಹರ್ತಿಗೆ ಹಿಂದಿರುಗುತ್ತಿದ್ದಾಗ ಗದಗ-ಲಕ್ಷ್ಮೇಶ್ವರ ರಸ್ತೆಯಲ್ಲಿ ಬೈಕ್ ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದಿದೆ. ಅವರ ಹಿಂದೆ ಬಂದ ಟಿಪ್ಪರ್ ಹುಡೇದ ಅವರ ಕಾಲಿನ ಮೇಲೆ ಹರಿದಿದೆ.

ಹುಡೇದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT