ಹೆಚ್ ಡಿ ದೇವೇಗೌಡ 
ರಾಜ್ಯ

ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಬೇಗ ಬಂದು ಶರಣಾಗು: ಪ್ರಜ್ವಲ್ ರೇವಣ್ಣಗೆ ದೇವೇಗೌಡ ಎಚ್ಚರಿಕೆ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ.

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ.

ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!