ಪ್ರಾತಿನಿಧಿಕ ಚಿತ್ರ 
ರಾಜ್ಯ

ಸೈಬರ್ ವಂಚನೆ: 15.98 ಲಕ್ಷ ರೂ. ಕಳೆದುಕೊಂಡ ಹಾಸನ ಡಿವೈಎಸ್ಪಿ!

ಸೈಬರ್​​ ವಂಚನೆಗೆ ಸಿಲುಕಿ ಹಾಸನದ ಡಿವೈಎಸ್‌ಪಿ 15.98 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮೇ 21 ರಂದು ಹಾಸನದ ಸೈಬರ್ ಕ್ರೈಂ, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆಗೆ ಮುರುಳೀಧರ್ ದೂರು ನೀಡಿದ್ದಾರೆ.

ಹಾಸನ: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಲು ಸರ್ಕಾರ ಪ್ರಯತ್ನಿಸುತ್ತಿದ್ದರೂ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಸೈಬರ್​​ ವಂಚನೆಗೆ ಸಿಲುಕಿ ಹಾಸನದ ಡಿವೈಎಸ್‌ಪಿ 15.98 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಹಾಸನ ಉಪವಿಭಾಗದ ಡಿವೈಎಸ್ಪಿ ಮುರುಳೀಧರ್ ಅವರು ಸೈಬರ್ ವಂಚನೆಗೆ ಸಿಲುಕಿದ್ದು, ಅವರ ಖಾತೆಯಲ್ಲಿದ್ದ ಹಣವು ನೇರವಾಗಿ ಅಪರಿಚಿತ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದರಿಂದ 15.98 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಮೇ 21 ರಂದು ಹಾಸನದ ಸೈಬರ್ ಕ್ರೈಂ, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆಗೆ ದೂರು ನೀಡಿರುವ ಮುರುಳೀಧರ್, ಮೇ 20 ರಂದು ತಮ್ಮ ಫೋನ್‌ಗೆ ಸಂದೇಶ ಬಂದ ನಂತರವೇ ವಂಚನೆ ನಡೆದಿರುವುದು ಗೊತ್ತಾಗಿದೆ ಎಂದಿದ್ದಾರೆ.

ಮುರುಳೀಧರ್ ಠೇವಣಿ ಇಟ್ಟಿದ್ದ ಮಡಿಕೇರಿಯ ಬ್ಯಾಂಕ್‌ನಿಂದ ಆನ್‌ಲೈನ್ ಮೂಲಕ 10 ವಹಿವಾಟುಗಳಲ್ಲಿ 15.98 ಲಕ್ಷ ರೂ.ಗಳನ್ನು ವಿವಿಧ ಖಾತೆಗಳಿಗೆ ದುಷ್ಕರ್ಮಿಗಳು ವರ್ಗಾಯಿಸಿದ್ದಾರೆ. ಮುರುಳೀಧರ್ ಶಾಖೆಯ ವ್ಯವಸ್ಥಾಪಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬ್ಯಾಂಕ್ ಸಿಬ್ಬಂದಿ ಡಿವೈಎಸ್‌ಪಿ ಅವರ ಖಾತೆಯಿಂದ ವಿವಿಧ ಬ್ಯಾಂಕ್‌ಗಳಲ್ಲಿನ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದನ್ನು ಖಚಿತಪಡಿಸಿದ್ದಾರೆ.

ಸಿಇಎನ್ ಪೊಲೀಸರ ಪ್ರಕಾರ, ಇದು ಹೊಸ ರೀತಿಯ ಸೈಬರ್ ವಂಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಹಣವನ್ನು ನೇರವಾಗಿ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT