ನಟ ದರ್ಶನ್ ಮತ್ತು ಅರ್ಜುನ ಆನೆ 
ರಾಜ್ಯ

ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ನಟ Darshan Thoogudeepa ನೆರವು, ಸ್ಲ್ಯಾಬ್ ಕಲ್ಲುಗಳ ಪೂರೈಕೆ; Video

ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ‌ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿರುವಂತೆಯೇ ನಟ ದರ್ಶನ್ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಹಾಸನ: ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ‌ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿರುವಂತೆಯೇ ನಟ ದರ್ಶನ್ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಹೌದು.. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ‌ ನಿರ್ಮಾಣಕ್ಕೆ ದರ್ಶನ್ ನೆರವು ನೀಡಿದ್ದು, ಸ್ಮಾರಕ ನಿರ್ಮಾಣಕ್ಕೆ ಬೇಕಾದಷ್ಟು ಸ್ಲ್ಯಾಬ್ ಕಲ್ಲುಗಳನ್ನು ಅವರು ಕಳುಹಿಸಿದ್ದಾರೆ. ಸಕಲೇಶಪುರದ ಯಸಳೂರು ಸಮೀಪದ ದಬ್ಬಳ್ಳಿ ಕಟ್ಟೆ ನೆಡುತೋಪಿಗೆ ಕಲ್ಲುಗಳು ತಲುಪಿದ್ದು, ಈಗಾಗಲೇ ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ಹೇಳಲಾಗಿದೆ.

ಕೊಟ್ಟ ಮಾತು ಉಳಿಸಿಕೊಂಡ ದಾಸ

ಈ ಹಿಂದೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅರ್ಜುನ ಆನೆ ಸಮಾಧಿ ಕುರಿತು ಪೋಸ್ಟ್ ಮಾಡಿ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡುವುದಾಗಿ ಡಿ ಬಾಸ್ ಮಾತು ಕೊಟ್ಟಿದ್ದರು. ಈ ಮಾತನ್ನು ಅವರು ಉಳಿಸಿಕೊಂಡಿದ್ದು, ಕಲ್ಲನ್ನು ಸಮಾಧಿ ಸ್ಥಳಕ್ಕೆ ಪ್ರಯಾಸದಿಂದ ಸಾಗಿಸಿರೋ ಬಗ್ಗೆ ವೀಡಿಯೋ ಮಾಡಿ ದರ್ಶನ್ ಆಪ್ತರು ಶೇರ್ ಮಾಡಿದ್ದಾರೆ.

ಪ್ರಾಣಿಪ್ರಿಯ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಪ್ರಾಣಿಪ್ರಿಯರಾಗಿದ್ದು, ತಮ್ಮ ಫಾರ್ಮ್ ಹೌಸ್ ನಲ್ಲಿ ಸಾಕಷ್ಟು ಬಗೆಯ ಪ್ರಾಣಿ-ಪಕ್ಷಿಗಳನ್ನು ಸಾಕಿ ಸಲಹುತ್ತಿದ್ದಾರೆ. ಮಾತ್ರವಲ್ಲದೇ ಅವರು ಈಗಾಗಲೇ ಮೈಸೂರಿನ ಮೃಗಾಲಯದ ಸಾಕಷ್ಟು ಪ್ರಾಣಿಗಳನ್ನು ದತ್ತು ಪಡೆದು ಸಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸ್: ಶ್ರೀಲಂಕಾ XI ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟ ಸಿರಾಜ್; ಬ್ಯಾಟ್ ಪರೀಕ್ಷಿಸಿದ ಲಂಕನ್ನರು!

ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗಾಗಿ ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್, video!

Toxic Trailer: ಹಿರೋಯಿನ್ ಎದುರು ಯಶ್ ಬೆತ್ತಲೆ ಸೀನ್ ನೋಡಿ ಅಭಿಮಾನಿಗಳು ದಂಗು; ಬಾಕ್ಸ್ ಆಫೀಸ್ ನಲ್ಲಿ 3000 ಕೋಟಿ ಫಿಕ್ಸ್ ಎಂದ ಫ್ಯಾನ್ಸ್!

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!