ಅಪಘಾತಕ್ಕೀಡಾದ ಕಾರು. 
ರಾಜ್ಯ

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ: ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಿದ್ದ ಕಾರು, ನಾಲ್ವರ ದುರ್ಮರಣ!

ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ.

ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರನ್ನು ಹಾವೇರಿಯ ಅಶ್ವಿನಿ ನಗರದ ಸುರೇಶ್(45), ಐಶ್ವರ್ಯ(22), ಚೇತನಾ(7), ಪ್ರಮಿಳಾ(28) ಎಂದು ಗುರುತಿಸಲಾಗಿದೆ. ಸುರೇಶ್​, ಐಶ್ವರ್ಯ, ಚೇತನಾ ಸ್ಥಳದಲ್ಲೇ ಮೃತಪಟ್ಟರೆ, ಪ್ರಮೀಳಾ ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಬಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಾವೇರಿ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೆಬೆನ್ನೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT