ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿಯಲ್ಲಿ ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ ತಾಲೂಕಿನ ಶಿರ್ವ ಮಾಣಿಬೆಟ್ಟು ಬಳಿ ಸಿಡಿಲು ಬಡಿದು 20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉಡುಪಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಉಡುಪಿ ತಾಲೂಕಿನ ಶಿರ್ವ ಮಾಣಿಬೆಟ್ಟು ಬಳಿ ಸಿಡಿಲು ಬಡಿದು 20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ರಕ್ಷಿತ್ ಪೂಜಾರಿ ಎಂಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಪೂಜಾರಿ ಅವರು ತಮ್ಮ ಮನೆಯ ಹೊರಾಂಗಣ ವಾಶ್ ರೂಂ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಶಿರ್ವ ಮಾಣಿಬೆಟ್ಟುವಿನ ತೋಟದಮನೆಯಲ್ಲಿ ವಾಸಿಸುತ್ತಿದ್ದ ರಕ್ಷಿತ್ ಪೂಜಾರಿ ಅವರು ಶಿರ್ವದ MSRS ಕಾಲೇಜಿನಲ್ಲಿ ಎರಡನೇ ವರ್ಷದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್(BCA) ಮಾಡುತ್ತಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT