ಸಾಂದರ್ಭಿಕ ಚಿತ್ರ  
ರಾಜ್ಯ

ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ: ಸರ್ಕಾರಿ ಶಾಲೆಗಳಿಗೆ 7 ಅಂಶಗಳ ಸೂತ್ರವನ್ನು ಹೊರಡಿಸಿದ ಶಿಕ್ಷಣ ಇಲಾಖೆ

2024-25ರ ಹೊಸ ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಏಳು ಅಂಶಗಳ ಪರಿಹಾರವನ್ನು ಸೂಚಿಸಿದೆ.

ಬೆಂಗಳೂರು: 2024-25ರ ಹೊಸ ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಏಳು ಅಂಶಗಳ ಪರಿಹಾರವನ್ನು ಸೂಚಿಸಿದೆ.

ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರುವಂತೆ ಪ್ರೇರೇಪಿಸಲು ತಾಲೂಕು ಮತ್ತು ಬ್ಲಾಕ್‌ ಮಟ್ಟದ ಅಧಿಕಾರಿಗಳು ಮೇ 30ರಿಂದ ಕಡ್ಡಾಯವಾಗಿ ಜಾಗೃತಿ ಅಭಿಯಾನ ನಡೆಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇಲಾಖಾ ಅಧಿಕಾರಿಗಳು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಮೇ 27 ರೊಳಗೆ ಶಾಲೆಗಳಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿ ಸ್ನೇಹಿ ವಾತಾವರಣವನ್ನು ನಿರ್ಮಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

6-14 ವರ್ಷದೊಳಗಿನ ಎಲ್ಲಾ ಮಕ್ಕಳು ಶಾಲೆಗೆ ದಾಖಲಾಗಿದ್ದಾರೆಯೇ ಎಂದು ಪರಿಶೀಲಿಸಬೇಕು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ಬಾಲಕರಿಗೆ ಬಸ್ ಪಾಸ್ ವ್ಯವಸ್ಥೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 1 ರಿಂದ 5, 1 ರಿಂದ 6, 1 ರಿಂದ 7 ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳನ್ನು ಉನ್ನತ ತರಗತಿಗಳಿಗೆ ದಾಖಲಿಸಲಾಗಿದೆ ಮತ್ತು ಟ್ಯಾಗ್ ಮಾಡಲಾಗಿದೆ ಎಂದು ಶಾಲೆಗಳು ಖಚಿತಪಡಿಸಿಕೊಳ್ಳಬೇಕು.

ಈ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಹತ್ತಿರದ ಶಾಲೆಗಳಲ್ಲಿ ದಾಖಲಿಸಬೇಕು. ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಬಾಲಕರು ಮತ್ತು ಬಾಲಕಿಯರ ದಾಖಲೆಯನ್ನು ನಿರ್ವಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮೇ 23 ರ ಪತ್ರದಲ್ಲಿ ವಿವರಿಸಲಾಗಿದೆ.

ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಪೋಷಕರು ಮತ್ತು ಪಂಚಾಯತ್‌ಗಳೊಂದಿಗೆ ಸ್ಥಳೀಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಗಳ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕವನ್ನು ಬಿಡುಗಡೆ ಮಾಡಲಾಗಿದ್ದು, ಅದನ್ನು ಎಲ್ಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಸೂಚಿಸಿದೆ. ಅದರೊಂದಿಗೆ ವಾರ್ಷಿಕ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಕಲಿಸಲು ಸೇತು ಬಂಧ ಸಾಹಿತ್ಯವನ್ನು ಬಳಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT