ಸಾಂದರ್ಭಿಕ ಚಿತ್ರ  
ರಾಜ್ಯ

ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ: ಸರ್ಕಾರಿ ಶಾಲೆಗಳಿಗೆ 7 ಅಂಶಗಳ ಸೂತ್ರವನ್ನು ಹೊರಡಿಸಿದ ಶಿಕ್ಷಣ ಇಲಾಖೆ

2024-25ರ ಹೊಸ ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಏಳು ಅಂಶಗಳ ಪರಿಹಾರವನ್ನು ಸೂಚಿಸಿದೆ.

ಬೆಂಗಳೂರು: 2024-25ರ ಹೊಸ ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಏಳು ಅಂಶಗಳ ಪರಿಹಾರವನ್ನು ಸೂಚಿಸಿದೆ.

ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರುವಂತೆ ಪ್ರೇರೇಪಿಸಲು ತಾಲೂಕು ಮತ್ತು ಬ್ಲಾಕ್‌ ಮಟ್ಟದ ಅಧಿಕಾರಿಗಳು ಮೇ 30ರಿಂದ ಕಡ್ಡಾಯವಾಗಿ ಜಾಗೃತಿ ಅಭಿಯಾನ ನಡೆಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇಲಾಖಾ ಅಧಿಕಾರಿಗಳು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಮೇ 27 ರೊಳಗೆ ಶಾಲೆಗಳಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿ ಸ್ನೇಹಿ ವಾತಾವರಣವನ್ನು ನಿರ್ಮಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

6-14 ವರ್ಷದೊಳಗಿನ ಎಲ್ಲಾ ಮಕ್ಕಳು ಶಾಲೆಗೆ ದಾಖಲಾಗಿದ್ದಾರೆಯೇ ಎಂದು ಪರಿಶೀಲಿಸಬೇಕು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ಬಾಲಕರಿಗೆ ಬಸ್ ಪಾಸ್ ವ್ಯವಸ್ಥೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 1 ರಿಂದ 5, 1 ರಿಂದ 6, 1 ರಿಂದ 7 ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳನ್ನು ಉನ್ನತ ತರಗತಿಗಳಿಗೆ ದಾಖಲಿಸಲಾಗಿದೆ ಮತ್ತು ಟ್ಯಾಗ್ ಮಾಡಲಾಗಿದೆ ಎಂದು ಶಾಲೆಗಳು ಖಚಿತಪಡಿಸಿಕೊಳ್ಳಬೇಕು.

ಈ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಹತ್ತಿರದ ಶಾಲೆಗಳಲ್ಲಿ ದಾಖಲಿಸಬೇಕು. ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಬಾಲಕರು ಮತ್ತು ಬಾಲಕಿಯರ ದಾಖಲೆಯನ್ನು ನಿರ್ವಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮೇ 23 ರ ಪತ್ರದಲ್ಲಿ ವಿವರಿಸಲಾಗಿದೆ.

ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಪೋಷಕರು ಮತ್ತು ಪಂಚಾಯತ್‌ಗಳೊಂದಿಗೆ ಸ್ಥಳೀಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಗಳ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕವನ್ನು ಬಿಡುಗಡೆ ಮಾಡಲಾಗಿದ್ದು, ಅದನ್ನು ಎಲ್ಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಸೂಚಿಸಿದೆ. ಅದರೊಂದಿಗೆ ವಾರ್ಷಿಕ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಕಲಿಸಲು ಸೇತು ಬಂಧ ಸಾಹಿತ್ಯವನ್ನು ಬಳಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT