ಸಂಗ್ರಹ ಚಿತ್ರ 
ರಾಜ್ಯ

ಖಾಸಗಿ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಕೆ: 7 ವಿಶೇಷ ತಂಡ ರಚನೆ, ಜೂನ್ 1ರಿಂದ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಮುಂದು!

ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಬೆಂಗಳೂರು: ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿದ್ದು, ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆ ಆರಂಭಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರುವ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತುಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌.

ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆ ರವಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ