ಬಿಎಂಟಿಸಿ ಬಸ್ ಗಳು BMTC
ರಾಜ್ಯ

ಬೆಂಗಳೂರು: ಬಿಎಂಟಿಸಿಗೆ ಉತ್ತರ ಪ್ರದೇಶದ ನಿಯೋಗ ಭೇಟಿ, ಶಕ್ತಿ ಯೋಜನೆ ಸೇರಿ ಹಸಿರು ತಂತ್ರಜ್ಞಾನದ ಕುರಿತು ಚರ್ಚೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬಿಎಂಟಿಸಿಗೆ ಭೇಟಿ ನೀಡಿ, ಶಕ್ತಿ ಯೋಜನೆ ಸೇರಿ ಹಸಿರು ತಂತ್ರಜ್ಞಾನದ ಕುರಿತು ಮಾಹಿತಿ ಪಡೆದುಕೊಂಡರು.

ಬೆಂಗಳೂರು: ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬಿಎಂಟಿಸಿಗೆ ಭೇಟಿ ನೀಡಿ, ಶಕ್ತಿ ಯೋಜನೆ ಸೇರಿ ಹಸಿರು ತಂತ್ರಜ್ಞಾನದ ಕುರಿತು ಮಾಹಿತಿ ಪಡೆದುಕೊಂಡರು.

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರನ್ನಾತ ಐಶ್ವರ್ಯ, ಪ್ರಧಾನ ವ್ಯವಸ್ಥಾಪಕ (ಟೆಕ್‌) ರಾಜೀವ್ ಆನಂದ್, ಪ್ರಾದೇಶಿಕ ವ್ಯವಸ್ಥಾಪಕ ಕೇಸರಿ ನಂದನ್ ಚೌಧರಿ, ಸೇವಾ ನಿರ್ವಾಹಕ ಅನುರಾಗ್ ಯಾದವ್ ಅವರು ಬಿಎಂಟಿಸಿಗೆ ಭೇಟಿ ನೀಡಿದ್ದು, ಈ ನಿಯೋಗಕ್ಕೆ ಬಿಎಂಟಿಸಿ ನಿರ್ದೇಶಕಿ (ಮಾಹಿತಿ ತಂತ್ರಜ್ಞಾನ) ಶಿಲ್ಪಾ ಪ್ರಾತ್ಯಕ್ಷಿಕೆ ನೀಡಿದರು.

ಬಿಎಂಟಿಸಿ ಅಳವಡಿಸಿಕೊಂಡಿರುವ ಮಾದರಿ ಉಪಕ್ರಮಗಳು, ಸಂಸ್ಥೆಯ ಇತಿಹಾಸ, ಶಕ್ತಿ ಯೋಜನೆಯ ಅನುಷ್ಠಾನ, ಪ್ರಯಾಣಿಕರ ಪಾಸ್ ವ್ಯವಸ್ಥೆ, ಆರ್ಥಿಕ ಕಾರ್ಯಕ್ಷಮತೆ, ಸಂಚಾರ ಆದಾಯ, ಜಾಹೀರಾತು ಶಿಷ್ಟಾಚಾರ, ಸಂಸ್ಥೆಯ ಬಸ್ ವೇಳಾಪಟ್ಟಿ, ಕಾರ್ಯಚರಣೆಗಳ ವೆಚ್ಚ, ಎಲೆಕ್ಟ್ರಿಕ್ ಬಸ್ಸುಗಳ ಹಸಿರು ತಂತ್ರಜ್ಞಾನದ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ (ಆಚರಣೆ) ಜಿ.ಟಿ. ಪ್ರಭಾಕರ ರೆಡ್ಡಿ, ಮುಖ್ಯ ತಾಂತ್ರಿಕ ಎಂಜಿನಿಯರ್‌ ಎ.ಎನ್. ಗಜೇಂದ್ರ ಕುಮಾರ್, ಗಣಕ ವ್ಯವಸ್ಥಾಪಕಿ ಎ. ಪ್ರಿಯಾಂಕ, ವಿಭಾಗೀಯ ಸಂಚಾರ ಅಧಿಕಾರಿ ಪ್ರತಿಮಾ.ಎಸ್.ವಿ. ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT