ಹತ್ಯೆ (ಸಾಂಕೇತಿಕ ಚಿತ್ರ) 
ರಾಜ್ಯ

ರಾಮನಗರ: ಹಣ ಕೊಡದಿದ್ದಕ್ಕೆ ಕೋಪ, ಪತ್ನಿ ಕೊಂದು ಕಾಲಿಗೆ ಹಗ್ಗ ಕಟ್ಟಿ ಮೃತದೇಹವನ್ನು 300 ಮೀ ಎಳೆದೊಯ್ದ ಪತಿ!

ಕುಡಿತದ ಚಟಕ್ಕೆ ಹಣ ನೀಡದ್ದಕ್ಕೆ ಕೋಪಗೊಂಡ ಪತಿಯೊಬ್ಬ, ಪತ್ನಿಯ ಕೊಂದು ಕಾಲಿಗೆ ಹಗ್ಗ ಕಟ್ಟಿ ಮೃತದೇಹವನ್ನು 300 ಮೀಟರ್ ಎಳೆದೊಯ್ದಿರುವ ಘಟನೆಯೊಂದು ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಕುಡಿತದ ಚಟಕ್ಕೆ ಹಣ ನೀಡದ್ದಕ್ಕೆ ಕೋಪಗೊಂಡ ಪತಿಯೊಬ್ಬ, ಪತ್ನಿಯ ಕೊಂದು ಕಾಲಿಗೆ ಹಗ್ಗ ಕಟ್ಟಿ ಮೃತದೇಹವನ್ನು 300 ಮೀಟರ್ ಎಳೆದೊಯ್ದಿರುವ ಘಟನೆಯೊಂದು ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಚನ್ನಪಟ್ಟಣದ ಕಸಬಾ ನಿವಾಸಿಯಾಗಿರುವ ಸಿ ಅಶ್ವಿನಿ (27) ಮೃತ ದುರ್ದೈವಿ. ಆರೋಪಿಯನ್ನು ರಮೇಶ್ ಎಂದು ಗುರ್ತಿಸಲಾಗಿದೆ.

ಅಶ್ವಿನಿ ವೈದ್ಯರೊಬ್ಬ ಮನೆಯಲ್ಲಿ ಅಡುಗೆ ಕೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದರು. ಗಳಿಕೆಯ ಹಣವನ್ನು ರಮೇಶ್ ಕೇಳಿದ್ದು, ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.

ಬುಧವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಗುರುವಾರ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ವಿರುಪಾಕ್ಷಿಪುರ ಹೋಬಳಿಯ ಮನಗಡಹಳ್ಳಿ ಗ್ರಾಮದಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ.

ರಮೇಶ್ ಕುಡಿದು ಬಂದು ಪತ್ನಿಗೆ ಥಳಿಸುತ್ತಿದ್ದ. ಕಿರುಕುಳ ತಾಳಲಾರದೆ ಅಶ್ವಿನಿ ತನ್ನ ಇಬ್ಬರು ಮಕ್ಕಳೊಂದಿಗೆ ಪೋಷಕರ ಮನೆಗೆ ತೆರಳಿದ್ದಳು. ನಂತರ ಆರೋಪಿ ಅತ್ತೆಯ ಮನೆಗೆ ಹೋಗಿ ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮನವೊಲಿಸಿ ಮನೆಗೆ ಕರೆತಂದಿದ್ದಾನೆ. ಆದರೆ, ಮತ್ತೆ ಪತ್ನಿಗೆ ಕಿರುಕುಳ ನೀಡಿ, ಹತ್ಯೆ ಮಾಡಿದ್ದಾನೆ.

ಗುರುವಾರ ಅಶ್ವಿನಿಯವರ ತಾಯಿ ಮಂಜಮ್ಮ ಅವರಿಗೆ ಸಂಬಂಧಿಕರು ಕೊಲೆಯ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೇ ಮಂಜಮ್ಮ ಅವರು ಮಗನೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ. ಸ್ಥಳದಲ್ಲಿ ಮಗಳ ಕಾಲಿಗೆ ಹಗ್ಗವನ್ನು ಕಟ್ಟಿರುವುದು ಕಂಡು ಬಂದಿದೆ. ಬಳಿಕ ರಮೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.

ಅಶ್ವಿನಿಯವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ನಂತರ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT