ಟ್ರ್ಯಾಕ್ ನಿರ್ವಹಣಾ ಸಿಬ್ಬಂದಿ ಪ್ರದೀಪ್ ಶೆಟ್ಟಿ ಅವರನ್ನು ಕೆಆರ್ ಅಧಿಕಾರಿಗಳು ಸನ್ಮಾನಿಸಿದರು. 
ರಾಜ್ಯ

ಉಡುಪಿ: ಹಳಿಯಲ್ಲಿದ್ದ ದೋಷ ಪತ್ತೆ ಹಚ್ಚಿದ ಟ್ರ್ಯಾಕ್​ ನಿರ್ವಾಹಕ; ತಪ್ಪಿತು ಸಂಭಾವ್ಯ ರೈಲು ಅವಘಡ!

ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬಿದ್ರಿ ನಡುವಿನ ರೈಲ್ವೆ ಹಳಿಯಲ್ಲಿ ವೆಲ್ಡಿಂಗ್ ಜಾಯಿಂಟ್ ಬಿಟ್ಟಿರುವುದನ್ನು ಪತ್ತೆ ಹಚ್ಚುವ ಮೂಲಕ ರೈಲ್ವೆ ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಸಂಭಾವ್ಯ ಅವಘಡ ತಪ್ಪಿಸಿದ್ದಾರೆ.

ಉಡುಪಿ: ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬಿದ್ರಿ ನಡುವಿನ ರೈಲ್ವೆ ಹಳಿಯಲ್ಲಿ ವೆಲ್ಡಿಂಗ್ ಜಾಯಿಂಟ್ ಬಿಟ್ಟಿರುವುದನ್ನು ಪತ್ತೆ ಹಚ್ಚುವ ಮೂಲಕ ರೈಲ್ವೆ ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಸಂಭಾವ್ಯ ಅವಘಡ ತಪ್ಪಿಸಿದ್ದಾರೆ.

ಮಧ್ಯರಾತ್ರಿ 2.25ರ ಸುಮಾರಿಗೆ ಹಳಿ ಜಾಯಿಂಟ್‌ ಬಿಟ್ಟಿರುವುದನ್ನು ಗಮನಿಸಿದ ಪ್ರದೀಪ್ ಶೆಟ್ಟಿ, ತಕ್ಷಣ ಉಡುಪಿಯ ಆರ್‌ಎಂಇ ಗಮನಕ್ಕೆ ತಂದಿದ್ದಾರೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಳಿ ದುರಸ್ತಿಗೊಳಿಸಿ ಸಮಸ್ಯೆ ಪರಿಹರಿಸಿದ್ದಾರೆ.

ದುರಸ್ತಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ವ್ಯತ್ಯಯ ವಾಗಿದ್ದು, ರೈಲುಗಳನ್ನು ಉಡುಪಿ ಹಾಗೂ ಸುರತ್ಕಲ್ ನಿಲ್ದಾಣಗಳಲ್ಲಿ ಕೆಲಹೊತ್ತು ತಡೆ ಹಿಡಿಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರವಾರಕ್ಕೆ ಹೋಗುವ ಪಂಚಗಂಗಾ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕ ವಿಶಾಲ್ ಶೆಣೈ, ಪಡುಬಿದ್ರಿಯಿಂದ ದಕ್ಷಿಣಕ್ಕೆ ಸುಮಾರು 9 ಕಿ.ಮೀ. ದೂರದಲ್ಲಿರುವ ನಂದಿಕೂರು ನಿಲ್ದಾಣದಲ್ಲಿ ರೈಲನ್ನು ತಡೆಹಿಡಿಯಲಾಗಿದೆ ಎಂದು ವಿವರಿಸಿದ್ದಾರೆ.

ಅದೇ ಸಮಯದಲ್ಲಿ, ಉಡುಪಿಯಿಂದ ಮುಂಜಾನೆ 3 ಗಂಟೆಗೆ ಮಂಗಳೂರು ಜಂಕ್ಷನ್ ಕಡೆಗೆ ಹೊರಡಬೇಕಿದ್ದ ರೈಲು ಸಂಖ್ಯೆ 16345 ಮುಂಬೈ ಎಲ್‌ಟಿಟಿ-ತಿರುವನಂತಪುರಂ ಸೆಂಟ್ರಲ್ ನೇತ್ರಾವತಿ ಎಕ್ಸ್‌ಪ್ರೆಸ್ ರೈಲನ್ನು ಇನ್ನಂಜೆಯಲ್ಲಿ, ಮುಂಜಾನೆ 4 ಗಂಟೆ ಸುಮಾರಿಗೆ ಹಾದು ಹೋಗಬೇಕಿದ್ದ ರೈಲು ಸಂಖ್ಯೆ 16595 ಕೆಎಸ್‌ಆರ್ ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್ ಎರಡೂ ರೈಲುಗಳನ್ನು ಹಳಿ ದೋಷವನ್ನು ಸರಿಪಡಿಸುವವರೆಗೂ ತಡೆಹಿಡಿಯಲಾಗಿತ್ತು.

20 ಕಿ.ಮೀ ವೇಗದ ನಿರ್ಬಂಧದೊಂದಿಗೆ ಹಳಿ ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಿದ ನಂತರ ರೈಲು ಸಂಚಾರವನ್ನು ಮರುಸ್ಥಾಪಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕ ವಿಭಾಗದ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.

ತಾಪಮಾನದಲ್ಲಿನ ಹಠಾತ್ ಕುಸಿತದಿಂದ ಕೆಲವೊಮ್ಮೆ ವೆಲ್ಡಿಂಗ್ ಜಾಯಿಂಟ್ ಬಿಟ್ಟುಕೊಳ್ಳುತ್ತದೆ ಎಂದು ಕೊಂಕಣ ರೈಲ್ವೆಯ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕ ಬಿ ಬಿ ನಿಕಮ್ ಹೇಳಿದ್ದಾರೆ.

ಈ ನಡುವೆ ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಅವರ ಕರ್ತವ್ಯಕ್ಕೆ ಮೆಚ್ಚಿ ಕೊಂಕಣ ರೈಲ್ವೆಯ ನೂತನ ಸಿಎಂಡಿ ಸಂತೋಷ ಕುಮಾರ್ ಝಾ ರೂ.25 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ.

ಅದರಂತೆ ಉಡುಪಿಯ ಹಿರಿಯ ಎಂಜಿನಿಯರ್ ಗೋಪಾಲಕೃಷ್ಣ ಹಳಿ ದುರಸ್ತಿ ನಡೆದ ಸ್ಥಳದಲ್ಲಿಯೇ ಪ್ರದೀಪ್ ಶೆಟ್ಟಿ ಅವರಿಗೆ ಬಹುಮಾನದ ಚೆಕ್‌ ಹಸ್ತಾಂತರಿಸಿ ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT