ಸಂಗ್ರಹ ಚಿತ್ರ 
ರಾಜ್ಯ

ಬಕ್ರೀದ್: ತ್ಯಾಜ್ಯ ನಿರ್ವಹಣೆಗೆ ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರ ಆಗ್ರಹ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.

UVCE ಜಲ ಸಂಸ್ಥೆಯ ನಿರ್ದೇಶಕರಾದ ಇನಾಯುತುಲ್ಲಾ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅವರಿಗೆ ಈ ಸಬಂಧ ಮನವಿ ಸಲ್ಲಿಸಿದ್ದಾರೆ.

ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ ನಗರದಲ್ಲಿ 400 ಟನ್ ಗಳಷ್ಟು ತ್ಯಾಜ್ಯ ಉಂಟಾಗುತ್ತದೆ. ಹಬ್ಬದ ದಿನ 3 ಲಕ್ಷ ಪ್ರಾಣಿಗಳನ್ನು ಬಲಿ ನೀಡಲಾಗುತ್ತದೆ. ಇದರಿದಂ ತ್ಯಾಜ್ಯ ಉಂಟಾಗುತ್ತದೆ. ಸುರಕ್ಷತೆ, ಪ್ರಾಣಿ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಕಸಾಯಿಖಾನೆಗಳನ್ನು ಸ್ಥಾಪಿಸಬೇಕು. ಇಲ್ಲಿ ಪ್ರಾಣೆ, ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ವ್ಯವಸ್ಥೆ ಇರುವಂತೆ ಮಾಡಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎದುರಾಗಿದ್ದ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ವಿವೇಚನೆಯಿಂದ ಬಳಕೆ ಮಾಡಬೇಕು. ನಗರದ ಹಲವೆಡೆ ಒಳಚರಂಡಿ ವ್ಯವಸ್ಥೆಗಳು ಸಂಸ್ಕರಣಾ ಸಂಪರ್ಕಗಳನ್ನು ಹೊಂದಿಲ್ಲ. ಪ್ರಾಣಿಗಳ ಬಲಿದಾನದ ವೇಳೆ ತ್ಯಾಜ್ಯ ಮಳೆನೀರು ಚರಂಡಿಗೆ ಹೋಗುತ್ತವೆ. ಇದರಿಂದ ಜಲಮೂಲಗಳು ಹಾಳಾಗುತ್ತದೆ. ನಮ್ಮ ಒಳಚರಂಡಿ ಸಂಸ್ಕರಣಾ ಘಟಕಗಳು (ಎಸ್‌ಟಿಪಿ) ಪ್ರಾಣಿಗಳ ತ್ಯಾಜ್ಯವನ್ನು ತಡೆಯಲು ಫಿಲ್ಟರ್‌ಗಳನ್ನು ಹೊಂದಿಲ್ಲ, ಹೀಗಾಗಿ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಬಿಬಿಎಂಪಿ ವಾರ್ಡ್ ಎಂಜಿನಿಯರ್‌ಗಳು ಮತ್ತು ಆರೋಗ್ಯ ಅಧಿಕಾರಿಗಳ ಬೆಂಬಲದೊಂದಿಗೆ ತಂತ್ರಗಳನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT