ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ) 
ರಾಜ್ಯ

ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್ 2024 ಪ್ರಶಸ್ತಿ

ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ...

ಮೈಸೂರು: ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ - 2024 ಯನ್ನು ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಅವರು ಭಾನುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ದೇಶಪ್ರೇಮವನ್ನು ತುಂಬುವಲ್ಲಿ ಭಾಷಣ ಮತ್ತು ಬರಹಗಳ ಮೂಲಕ ಕೊಡುಗೆ ನೀಡಿದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ 'ವೀರ್ ಸಾವರ್ಕರ್ ಸಮ್ಮಾನ್ ಪ್ರಶಸ್ತಿ-2024' ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿಯು ರೂ.1 ಲಕ್ಷ ನಗದು, ಸಾವರ್ಕರ್ ಪುತ್ಥಳಿ ಹಾಗೂ ಫಲಕ ಹೊಂದಿದೆ. ಈ ಪ್ರಶಸ್ತಿಯನ್ನು ಮೇ 28ರಂದು ಸಂಜೆ 5.30ಕ್ಕೆ ನಗರದ ಕರ್ನಾಟಕ ಕಲಾಮಂದಿರ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಮಧ್ಯಾಹ್ನ 2 ಗಂಟೆಗೆ ಸಾವರ್ಕರ್ ವೇಷಭೂಷಣ, ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ನಡೆಯಲಿದೆ. ಈಗಾಗಲೇ ಮೊಬೈಲ್ ಮೂಲಕ ಸಾವರ್ಕರ್ ಕುರಿತು ಮಾಡಿರುವ ರೀಲ್ಸ್ ಗಳನ್ನು ಪಡೆಯಲಾಗುತ್ತಿದೆ. ಪ್ರತಿ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 5 ಸಾವಿರ, ದ್ವಿತೀಯ ಬಹುಮಾನವಾಗಿ 3 ಸಾವಿರ, ತೃತೀಯ ಬಹುಮಾನವಾಗಿ 1000 ನಗದು ಬಹುಮಾನದ ಜೊತೆಗೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಸಮಾರಂಭದಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಖ್ಯಾತ ಲೇಖಕ ಡಾ.ಎಸ್.ಎಲ್.ಭೈರಪ್ಪ ಆಗಮಿಸಲಿದ್ದು, ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಷಣ ಮಾಡಲಿದ್ದಾರೆಂದು ತಿಳಿಸಿದರು.

ಸಾವರ್ಕರ್ ಅವರ ಕುರಿತು ಸಂಶೋಧನೆ ಮತ್ತು ಪುಸ್ತಕಗಳ ಪ್ರಕಟಣೆಗಾಗಿ ಕಳೆದ ವರ್ಷ ವಿಕ್ರಮ್ ಸಂಪತ್ ಅವರಿಗೆ 'ವೀರ್ ಸಾವರ್ಕರ್ ಸಮ್ಮಾನ್ ಪ್ರಶಸ್ತಿ'ಯನ್ನು ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!