ರಾಹುಲ್ ಬಿರಾದರ್ 
ರಾಜ್ಯ

ವಿಜಯಪುರ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪೋಷಕರು, ಜೀವನ್ಮರಣ ಹೋರಾಟ!

ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಯಸಿಯನ್ನು ದೂರ ಮಾಡಿಕೊಳ್ಳಲು ಇಚ್ಛಿಸದ ಯುವಕನೋರ್ವ ನಿನ್ನೆ ಯುವತಿಯ ಮನೆ ಬಳಿ ಹೋಗಿದ್ದಾಗ ಯುವತಿಯ ಪೋಷಕರು ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಜಯಪುರ: ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಯಸಿಯನ್ನು ದೂರ ಮಾಡಿಕೊಳ್ಳಲು ಇಚ್ಛಿಸದ ಯುವಕನೋರ್ವ ನಿನ್ನೆ ಯುವತಿಯ ಮನೆ ಬಳಿ ಹೋಗಿದ್ದಾಗ ಯುವತಿಯ ಪೋಷಕರು ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ಘಟನೆ ನಡೆದಿದೆ. ರಾಹುಲ್ ಬಿರಾದರ್ ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ರಾಹುಲ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಈ ಮಧ್ಯೆ ಯುವತಿ ಐಶ್ವರ್ಯ ಮದರಿ ತಂದೆ ಅಪ್ಪು ಮದರಿ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸದವನಿಗೂ ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಐದಾರು ವರ್ಷಗಳಿಂದ ರಾಹುಲ್ ಹಾಗೂ ಐಶ್ವರ್ಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಎರಡೂ ಮನೆಯವರೂ ಒಂದು ವರ್ಷದ ಹಿಂದೆಯೇ ರಾಜಿ ಪಂಚಾಯ್ತಿ ಮಾಡಿ ಇಬ್ಬರನ್ನು ದೂರ ಮಾಡಿದ್ದರು. ಇದರಿಂದ ರಾಹುಲ್ ಆಕ್ರೋಶಕೊಂಡಿದ್ದ. ಅಲ್ಲದೆ ಯುವತಿ ಮನೆ ಬಳಿ ಹೆಚ್ಚಾಗಿ ಓಡುಡುತ್ತಿದ್ದನು. ಈ ವಿಚಾರವಾಗಿ ಐಶ್ವರ್ಯ ಮನೆಯವರು ಕರೆ ಮಾಡಿ ರಾಹುಲ್ ನನ್ನು ಪ್ರಶ್ನಿಸಿದ್ದರು.

ಈ ವೇಳೆ ಯುವಕ ನಾನು ನಿಮ್ಮ ಮನೆಗೆ ಬರುವುದಾಗಿ ಹೇಳಿದ್ದನು. ಅದರಂತೆ ಮನೆಗೆ ಬಂದ ರಾಹುಲ್ ಮೇಲೆ ಅಪ್ಪು ಮದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಎರಡೂ ಮನೆಯವರು ಪ್ರತ್ಯೇಕ ದೂರು ನೀಡಿದ್ದಾರೆ. ಯುವಕನೇ ಪೆಟ್ರೋಲ್ ತಂದು ತಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದ ಈ ವೇಳೆ ತಡೆಯಲು ಮುಂದಾದಾಗ ನಮಗೆ ಬೆಂಕಿ ತಗುಲಿದೆ ಎಂದು ದೂರಿದ್ದರೆ ಅತ್ತ ರಾಹುಲ್ ತಂದೆ ನಮ್ಮ ಮಗನನ್ನು ಮನೆಗೆ ಕರೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರು ನೀಡಿದ್ದಾರೆ.

ಸದ್ಯ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ