ಬಿಜೆಪಿ ಶಾಸಕ ಎಸ್‌ಎನ್‌ ಚನ್ನಬಸಪ್ಪ 
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹೊಸ ಉತ್ತುಂಗಕ್ಕೇರಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಅಧೀಕ್ಷಕ ಚಂದ್ರಶೇಖರನ್‌ ಅವರ ಆತ್ಮಹತ್ಯೆಯೇ ಇದಕ್ಕೆ ಸಾಕ್ಷಿ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಎಸ್‌ಎನ್‌ ಚನ್ನಬಸಪ್ಪ ಸೋಮವಾರ ಆರೋಪಿಸಿದ್ದಾರೆ.

ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕ ಜೆ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಂ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ. ಡೆತ್ ನೋಟ್‌ನಲ್ಲಿ ಮೂವರು ಅಧಿಕಾರಿಗಳಾದ ಜೆಜಿ ಪದ್ಮನಾಭ, ಪರಶುರಾಮ್ ಮತ್ತು ಶುಚಿಸ್ಮಿತ ಅವರ ಹೆಸರನ್ನು ನಮೂದಿಸಲಾಗಿದೆ. ಹೀಗಾಗಿ, ಘಟನೆ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ಪಕ್ಷದಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಈಗಿನ ಸರ್ಕಾರದಲ್ಲಿ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT