ಅರ್ಜುನ ಆನೆ ಸಮಾಧಿ 
ರಾಜ್ಯ

Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR

ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

ಹಾಸನ: ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದ ನವೀನ್ ಮತ್ತು ಆತನ ನೇತೃತ್ವದಲ್ಲಿ ಹಲವರು ಅತಿಕ್ರಮ ಪ್ರವೇಶ ಮಾಡಿದ್ದರು.

ಅಲ್ಲದೆ ಅರ್ಜುನ ಆನೆ ಸಮಾಧಿ ಭೂಮಿಯನ್ನು ಅಗೆದು ಕಲ್ಲಿನ ಸ್ಲಾಬ್‌ಗಳಿಂದ ಬೇಲಿ ಹಾಕಿ ಸಮಾಧಿಯನ್ನು ವಿರೂಪಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಈ ನಿಟ್ಟಿನಲ್ಲಿ ಸಮಾಧಿ ಸುತ್ತ ಬೇಲಿ ಹಾಕಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಸ್ಥಳೀಯರು ನೀಡಿದ್ದ ದೂರಿನ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಏನಿದು ಪ್ರಕರಣ?

ಈ ಹಿಂದೆ ಹಾಸನದ ಯಸಳೂರಿನಲ್ಲಿ ಕಾಡಾನೆ ಸೆರೆ ವೇಳೆ ದಸರಾ ಆನೆ ಅರ್ಜುನ ಮೃತಪಟ್ಟಿತ್ತು. ಆನೆಯನ್ನು ಅಲ್ಲಿಯೇ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಸಮಾಧಿ ಮಾಡಲಾಗಿತ್ತು. ಹಲವು ದಿನಗಳ ಬಳಿಕ ಈ ಸಮಾಧಿ ಸ್ಥಳಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅರ್ಜುನ ಆನೆ ಸಮಾಧಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಕುರಿತು ಟ್ವೀಟ್ ಮಾಡಿ, ಸ್ಮಾರಕ ನಿರ್ಮಿಸುವಂತೆ ಸರ್ಕಾರಕ್ಕೆ ಮತ್ತು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಬಳಿಕ ಸಮಾಧಿ ಸ್ಥಳಕ್ಕೆ ಕಲ್ಲಿನ ಸ್ಲಾಬ್ ಗಳನ್ನು ಕೂಡ ನೀಡಿದ್ದರು. ಈ ವಿಚಾರ ಸುದ್ದಿಯಾಗುತ್ತಲೇ ಅರಣ್ಯ ಇಲಾಖೆ ದರ್ಶನ್ ನೆರವನ್ನು ತಿರಸ್ಕರಿಸಿತ್ತು. ಆದರೆ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡ ಹೆಚ್.ಡಿ.ಕೋಟೆ ನಿವಾಸಿ ನವೀನ್ ಮತ್ತು ಆತನ ತಂಡ ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ತೆರಳಿ ಅಲ್ಲಿ ಸಮಾಧಿ ನಿರ್ಮಿಸಲು ಮುಂದಾಗಿ ಅರಣ್ಯ ಇಲಾಖೆ ಅನುಮತಿ ಇಲ್ಲದೇ ಭೂಮಿಯನ್ನು ಅಗೆದು ವಿರೂಪಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆ ನವೀನ್ ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕರಣ ದಾಖಲಿಸಿದೆ.

ಆದಷ್ಟು ಬೇಗ ಸ್ಮಾರಕಕ ನಿರ್ಮಿಸಿ: ಸಾರ್ವಜನಿಕರ ಆಗ್ರಹ

ಇನ್ನು ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಅರ್ಜುನ ಆನೆ ಸ್ಮಾರಕ ನಿರ್ಮಾಣ ಕಾರ್ಯವನ್ನು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಆ ಮೂಲಕ ದಶಕಗಳ ಕಾಲ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಅರ್ಜುನ ಆನೆಗೆ ಗೌರವ ನೀಡಬೇಕು ಎಂದು ಪರಿಸರವಾದಿಗಳು, ಪ್ರಾಣಿಪ್ರಿಯರು, ಸ್ಥಳೀಯರು ಮತ್ತು ಅರ್ಜುನ ಆನೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಹಿಂದೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಅರ್ಜುನ ಸ್ಮಾರಕ ನಿರ್ಮಿಸುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT