ಬೆಂಗಳೂರು ವಿಮಾನ ನಿಲ್ದಾಣ 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ, ತೀವ್ರ ತಪಾಸಣೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಶೌಚಾಲಯದ ಕನ್ನಡಿ ಮೇಲೆ ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಿರುವ ಸಂದೇಶ ಬರೆಯಲಾಗಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಶೌಚಾಲಯದ ಕನ್ನಡಿ ಮೇಲೆ ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಿರುವ ಸಂದೇಶ ಬರೆಯಲಾಗಿದ್ದು, ಕೆಲ ಕಾಲ ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.

ಇಂದು ಬೆಳಗ್ಗೆ ಬೆಳಗಿನ ಜಾವ 3.40ರ ಸುಮಾರಿಗೆ ಈ ಸಂದೇಶ ಬರೆಯಲಾಗಿದ್ದು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳ ತೀವ್ರ ತಪಾಸಣೆ ನಡೆಸಿದರು. ನಂತರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಇದು ಹುಸಿ ಬಾಂಬ್​ ಬೆದರಿಕೆ ಎಂದು ಘೋಷಿಸಲಾಯಿತು.

ವಿಮಾನ ಕಾರ್ಯಾಚರಣೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಹದಿನೈದು ದಿನಗಳ ಅವಧಿಯಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿರುವ ಎರಡನೇ ಹುಸಿ ಬಾಂಬ್​ ಬೆದರಿಕೆ ಇದಾಗಿದೆ.

ಭದ್ರತಾ ಅಧಿಕಾರಿಯೊಬ್ಬರ ಪ್ರಕಾರ, ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್​ನಲ್ಲಿನ ಶೌಚಾಲಯದ ಕನ್ನಡಿ ಮೇಲೆ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಸಂದೇಶ ಬರೆಯಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ನೋಡಿದ್ದಾರೆ. ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ನಮ್ಮ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಮತ್ತು ಸ್ನಿಫರ್ ಡಾಗ್‌ಗಳನ್ನು ತಕ್ಷಣವೇ ಕಾರ್ಯಗತಗೊಳಿಸಲಾಯಿತು. ನಮ್ಮ ಅನೇಕ ಸಿಬ್ಬಂದಿಗಳು ತಪಾಸಣೆಯನ್ನು ತೀವ್ರಗೊಳಿಸಿದರು. ತೀವ್ರ ಪರಿಶೀಲನೆ ನಂತರ ಇದು ಹುಸಿ ಬಾಂಬ್​ ಬೆದರಿಕೆ ಎಂದು ತಿಳಿದು ಬಂತು ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಸಿಬ್ಬಂದಿಯೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT