ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ (ಸಾಂದರ್ಭಿಕ ಚಿತ್ರ) 
ರಾಜ್ಯ

ನಾಗರಹೊಳೆ-ಬಂಡೀಪುರ ಅತಿಥಿಗಳಿಗೆ ಸಫಾರಿ ವಾಹನ ಹಂಚಿಕೆಯಲ್ಲಿ ಅನುಸರಿಸುವ ವಿಧಾನದ ಬಗ್ಗೆ ವಿವರಣೆ ನೀಡಿ: JLR ಗೆ ಹೈಕೋರ್ಟ್‌ ಸೂಚನೆ

ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ವಾಹನಗಳ ಹಂಚಿಕೆಗೆ ಸಂಬಂಧಿಸಿದಂತೆ ಇರುವ ನೀತಿ ಅಥವಾ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಈ ಕುರಿತಂತೆ ಅಫಿಡವಿಟ್‌ ಸಲ್ಲಿಸಿ ಎಂದು ಜೆಎಲ್‌ಆರ್‌ ಲಿಮಿಟೆಡ್‌ಗೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ಬೆಂಗಳೂರು: ಬಂಡೀಪುರ, ನಾಗರಹೊಳೆ ಮತ್ತು ಕಬಿನಿ ರಾಷ್ಟ್ರೀಯ ಉದ್ಯಾನದ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಒದಗಿಸಲಾಗುವ ಸಫಾರಿ ವಾಹನಗಳನ್ನು ಯಾವ ವಿಧಾನದಲ್ಲಿ ಹಂಚಿಕೆ ಮಾಡಲಾಗುತ್ತದೆ ಎಂಬ ಬಗ್ಗೆ ವಿವರಣೆ ಸಲ್ಲಿಸಬೇಕು ಎಂದು ಹೈಕೋರ್ಟ್‌ ಮಂಗಳವಾರ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್‌ಗೆ (ಜೆಎಲ್‌ಆರ್‌) ನಿರ್ದೇಶಿಸಿದೆ.

ನಾಗರಹೊಳೆ, ಬಂಡೀಪುರ ಮತ್ತು ಕಬಿನಿ ಅಭಯಾರಣ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ರೆಸಾರ್ಟ್‌ಗಳನ್ನು ಪ್ರತಿನಿಧಿಸುವ, ಕರ್ನಾಟಕ ಇಕೊ ಟೂರಿಸ್ಟ್‌ ರೆಸಾರ್ಟ್ಸ್‌ ಅಸೋಸಿಯೇಷನ್‌ ಕಾರ್ಯದರ್ಶಿ ರೋಹನ್‌ ಮಿಶ್ರಾ ಸೇರಿದಂತೆ ಒಟ್ಟು ಒಂಬತ್ತು ಜನರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ವಾಹನಗಳ ಹಂಚಿಕೆಗೆ ಸಂಬಂಧಿಸಿದಂತೆ ಇರುವ ನೀತಿ ಅಥವಾ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಈ ಕುರಿತಂತೆ ಅಫಿಡವಿಟ್‌ ಸಲ್ಲಿಸಿ ಎಂದು ಜೆಎಲ್‌ಆರ್‌ ಲಿಮಿಟೆಡ್‌ಗೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ಮೂರೂ ಅಭಯಾರಣ್ಯಗಳಲ್ಲಿ ತಂಗುವ ಅತಿಥಿಗಳಲ್ಲಿ ಶೇ 50ರಷ್ಟು ಸಫಾರಿ ವಾಹನಗಳನ್ನು ಖಾಸಗಿ ರೆಸಾರ್ಟ್‌ಗಳಿಗೆ ಹಂಚಿಕೆ ಮಾಡುವ ಕುರಿತ ನಿರ್ಣಯಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಸಫಾರಿ ವಾಹನಗಳ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ. ಹೀಗಾಗಿ, ಸಫಾರಿ ವಾಹನಗಳ ನ್ಯಾಯಸಮ್ಮತ ಹಂಚಿಕೆ ಮತ್ತು ಈಗಿರುವ ಸೌಲಭ್ಯಗಳನ್ನು ವಿಸ್ತರಿಸುವಾಗ ಯಾವುದೇ ತಾರತಮ್ಯ ಎಸಗದಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಫಾರಿ ವಾಹನಗಳಿಗಾಗಿ ಕ್ಯಾಂಟರ್‌ ಮತ್ತು ಜೀಪ್‌ಗಳನ್ನು ಒದಗಿಸಲಾಗುತ್ತದೆ. ಖಾಸಗಿ ರೆಸಾರ್ಟ್‌ಗಳು ಆನ್‌ಲೈನ್‌ ಮೂಲಕ ಆಸನಗಳನ್ನು ಕಾಯ್ದಿರಿಸಬಹುದಾದರೂ, ಕಾಯ್ದಿರಿಸಿದವರಿಗೆ ಜೀಪ್ ಅಥವಾ ಕ್ಯಾಂಟರ್‌ಗಳಲ್ಲಿ ಯಾವುದನ್ನು ಒದಗಿಸಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದಾಗ್ಯೂ, ಕ್ಯಾಂಟರ್‌ಗಳಲ್ಲಿ ಪ್ರಯಾಣಿಸಿದರೆ ಸಿಗುವ ಅನುಭವ ಜೀಪ್‌ಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಡಿಮೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಸಫಾರಿ ವಾಹನಗಳನ್ನು ಹಂಚಿಕೆ ಮಾಡುವುದು ಮತ್ತು ಅತಿಥಿಗಳಿಗೆ ಅರಣ್ಯದ ಸಫಾರಿ ಮಾರ್ಗಗಳನ್ನು ನಿಗದಿ ಮಾಡುವುದರಲ್ಲಿ ಪೂರ್ವಗ್ರಹ ಪೀಡಿತ ಭಾವನೆ ಪ್ರದರ್ಶಿಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಮತ್ತು ಖಾಸಗಿಯವರೆಗೂ ಸಮಾನ ಅವಕಾಶ ಲಭ್ಯವಾಗುವಂತೆ ಮಾಡಬೇಕು ಎಂದು ಮಧ್ಯಂತರ ಮನವಿಯಲ್ಲಿ ಕೋರಲಾಗಿದೆ. ಖಾಸಗಿ ರೆಸಾರ್ಟ್‌ಗಳು ನಾಗರಹೊಳೆಯಲ್ಲಿ ಶೇ 71ರಷ್ಟು ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಶೇ 83ರಷ್ಟು ಪ್ರಮಾಣದಲ್ಲಿ ಅತಿಥಿಗಳಿಗೆ ಸೇವೆ ಒದಗಿಸುತ್ತಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT