ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ಮತಾಂತರಕ್ಕೆ ಒತ್ತಡ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ?

ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಮೇಶ್ವರಿ (50), ಮಗಳು ವಸಂತ (32) ಮತ್ತು ಮೊಮ್ಮಗ ಸಾಯಿ ಧರ್ಮತೇಜ (5) ಎಂದು ಗುರುತಿಸಲಾಗಿದೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ. ವಸಂತಾ ಅವರ ಪತಿ ಆರೀಫ್ ತಲೆಮರೆಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯು ಅವರ ಸಾವಿಗೆ ಕಾರಣವನ್ನು ಬಹಿರಂಗಪಡಿಸಲಿದೆ. “ನಾವು ಮೃತರ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ. ಆರಿಫ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಮೇಶ್ವರಿ ಮತ್ತು ವಸಂತ ಸೋಮವಾರ ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸದಿದ್ದಾಗ, ಗಾಬರಿಗೊಂಡ ಸಂಬಂಧಿಕರು ಮನೆಗೆ ಹೋಗಿ ನೋಡಿದಾಗ ಮೂವರೂ ಸಾವನ್ನಪ್ಪಿದ್ದಾರೆ. ರಾಮೇಶ್ವರಿ ಮತ್ತು ಸಾಯಿ ಧರ್ಮತೇಜ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಸಂತ ಅವರ ದೇಹ ಅಡುಗೆ ಕೋಣೆಯಲ್ಲಿ ಬಿದ್ದಿತ್ತು.

ಎರಡು ವರ್ಷಗಳ ಹಿಂದೆ ಪತಿಯಿಂದ ಬೇರ್ಪಟ್ಟ ವಸಂತಾ ತನ್ನ ಸಹೋದ್ಯೋಗಿ ಆರಿಫ್ ನನ್ನು ಮದುವೆಯಾಗಿದ್ದಳು. ಆರೀಫ್ ಮೂವರನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ವಸಂತಾ ಅವರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ವಸಂತ ಮತ್ತು ಆಕೆಯ ತಾಯಿ ವಿರೋಧಿಸಿದ್ದರಿಂದ ಪದೇ ಪದೇ ಜಗಳ ನಡೆಯುತ್ತಿತ್ತು. ತಿಂಗಳ ಹಿಂದೆ ಮಾತುಕತೆ ನಡೆಸಿ ಆರೀಫ್ ಹಾಗೂ ವಸಂತ ನಡುವಿನ ಸಮಸ್ಯೆ ಬಗೆಹರಿದಿತ್ತು. ಆದರೆ ಈ ವಿಚಾರ ಬಹಿರಂಗವಾದ ನಂತರ ವಸಂತಾ ಖಿನ್ನತೆಗೆ ಜಾರಿದ್ದರು.

ತಮ್ಮ ವಿವಾಹವಾದ ಮೂರು ತಿಂಗಳ ನಂತರ ಆರೀಫ್ ವಸಂತನನ್ನು ಇಸ್ಲಾಂಗೆ ಮತಾಂತರಿಸುವಂತೆ ಒತ್ತಾಯಿಸಲು ಪ್ರಾರಂಭಿಸಿದರು ಸಂಬಂಧಿಕರು ಮುನಿರಾಬಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆರಿಫ್‌ನಿಂದ ಚಿತ್ರಹಿಂಸೆಯ ಬಗ್ಗೆ ವಸಂತಾ ನಮಗೆ ತಿಳಿಸಿದ್ದಾಳೆ. ತನ್ನ ಸಮುದಾಯದವರ ಒತ್ತಡದಿಂದ ಆಕೆಯನ್ನು ಮತಾಂತರಗೊಳಿಸುವಂತೆ ಒತ್ತಾಯಿಸುತ್ತಿದ್ದ. ಒಂದು ತಿಂಗಳ ಹಿಂದೆ ಕುಟುಂಬ ಸದಸ್ಯರ ಸಭೆ ನಡೆಸಿದ್ದೆವು, ವಸಂತಾಳನ್ನು ಮತಾಂತರ ಮಾಡುವಂತೆ ಒತ್ತಾಯಿಸುವುದಿಲ್ಲ ಎಂದು ಆರಿಫ್ ಭರವಸೆ ನೀಡಿದ್ದ ಎಂದು ವಸಂತ ಅವರ ಸಂಬಂಧಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT