ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ಮತಾಂತರಕ್ಕೆ ಒತ್ತಡ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ?

ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಮೇಶ್ವರಿ (50), ಮಗಳು ವಸಂತ (32) ಮತ್ತು ಮೊಮ್ಮಗ ಸಾಯಿ ಧರ್ಮತೇಜ (5) ಎಂದು ಗುರುತಿಸಲಾಗಿದೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ. ವಸಂತಾ ಅವರ ಪತಿ ಆರೀಫ್ ತಲೆಮರೆಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯು ಅವರ ಸಾವಿಗೆ ಕಾರಣವನ್ನು ಬಹಿರಂಗಪಡಿಸಲಿದೆ. “ನಾವು ಮೃತರ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ. ಆರಿಫ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಮೇಶ್ವರಿ ಮತ್ತು ವಸಂತ ಸೋಮವಾರ ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸದಿದ್ದಾಗ, ಗಾಬರಿಗೊಂಡ ಸಂಬಂಧಿಕರು ಮನೆಗೆ ಹೋಗಿ ನೋಡಿದಾಗ ಮೂವರೂ ಸಾವನ್ನಪ್ಪಿದ್ದಾರೆ. ರಾಮೇಶ್ವರಿ ಮತ್ತು ಸಾಯಿ ಧರ್ಮತೇಜ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಸಂತ ಅವರ ದೇಹ ಅಡುಗೆ ಕೋಣೆಯಲ್ಲಿ ಬಿದ್ದಿತ್ತು.

ಎರಡು ವರ್ಷಗಳ ಹಿಂದೆ ಪತಿಯಿಂದ ಬೇರ್ಪಟ್ಟ ವಸಂತಾ ತನ್ನ ಸಹೋದ್ಯೋಗಿ ಆರಿಫ್ ನನ್ನು ಮದುವೆಯಾಗಿದ್ದಳು. ಆರೀಫ್ ಮೂವರನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ವಸಂತಾ ಅವರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ವಸಂತ ಮತ್ತು ಆಕೆಯ ತಾಯಿ ವಿರೋಧಿಸಿದ್ದರಿಂದ ಪದೇ ಪದೇ ಜಗಳ ನಡೆಯುತ್ತಿತ್ತು. ತಿಂಗಳ ಹಿಂದೆ ಮಾತುಕತೆ ನಡೆಸಿ ಆರೀಫ್ ಹಾಗೂ ವಸಂತ ನಡುವಿನ ಸಮಸ್ಯೆ ಬಗೆಹರಿದಿತ್ತು. ಆದರೆ ಈ ವಿಚಾರ ಬಹಿರಂಗವಾದ ನಂತರ ವಸಂತಾ ಖಿನ್ನತೆಗೆ ಜಾರಿದ್ದರು.

ತಮ್ಮ ವಿವಾಹವಾದ ಮೂರು ತಿಂಗಳ ನಂತರ ಆರೀಫ್ ವಸಂತನನ್ನು ಇಸ್ಲಾಂಗೆ ಮತಾಂತರಿಸುವಂತೆ ಒತ್ತಾಯಿಸಲು ಪ್ರಾರಂಭಿಸಿದರು ಸಂಬಂಧಿಕರು ಮುನಿರಾಬಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆರಿಫ್‌ನಿಂದ ಚಿತ್ರಹಿಂಸೆಯ ಬಗ್ಗೆ ವಸಂತಾ ನಮಗೆ ತಿಳಿಸಿದ್ದಾಳೆ. ತನ್ನ ಸಮುದಾಯದವರ ಒತ್ತಡದಿಂದ ಆಕೆಯನ್ನು ಮತಾಂತರಗೊಳಿಸುವಂತೆ ಒತ್ತಾಯಿಸುತ್ತಿದ್ದ. ಒಂದು ತಿಂಗಳ ಹಿಂದೆ ಕುಟುಂಬ ಸದಸ್ಯರ ಸಭೆ ನಡೆಸಿದ್ದೆವು, ವಸಂತಾಳನ್ನು ಮತಾಂತರ ಮಾಡುವಂತೆ ಒತ್ತಾಯಿಸುವುದಿಲ್ಲ ಎಂದು ಆರಿಫ್ ಭರವಸೆ ನೀಡಿದ್ದ ಎಂದು ವಸಂತ ಅವರ ಸಂಬಂಧಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT