ಕಾಡಾನೆ ಸಾವು TNIE
ರಾಜ್ಯ

ಕೊಡಗು: ವಿದ್ಯುತ್ ತಗುಲಿ ಕಾಡಾನೆ ಸಾವು

ಕೊಡಗಿನಲ್ಲಿ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ. ಕುಶಾಲನಗರ ತಾಲೂಕಿನ ಕೊಡಗರಹಳ್ಳಿಯಲ್ಲಿ ಘಟನೆ ನಡೆದಿದೆ.

ಮಡಿಕೇರಿ: ಕೊಡಗಿನಲ್ಲಿ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ. ಕುಶಾಲನಗರ ತಾಲೂಕಿನ ಕೊಡಗರಹಳ್ಳಿಯಲ್ಲಿ ಘಟನೆ ನಡೆದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಅಸ್ವಾಭಾವಿಕ ಸಾವು ಎಂದು ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಹಾನಿಗೊಳಗಾದ ವಿದ್ಯುತ್ ಕಂಬದ ಪಕ್ಕ ಸುಮಾರು 10 ರಿಂದ 12 ವರ್ಷ ಪ್ರಾಯದ ಆನೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ. ವಿದ್ಯುತ್ ಕಡಿತದ ಬಗ್ಗೆ ಸ್ಥಳೀಯರು ಇಲಾಖೆಗೆ ಕರೆ ಮಾಡಿದ್ದು ಈ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ಸರಿಪಡಿಸಲು ಸೆಸ್ಕ್ ಇಲಾಖೆ ಸಿಬ್ಬಂದಿ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.

ವಿದ್ಯುತ್ ಕಂಬದ ಮೇಲೆ ಕೆಲವು ಗುರುತು ಕಂಡುಬಂದಿದ್ದು, ಆನೆಯೇ ಕಂಬಕ್ಕೆ ಒದ್ದಿರಬಹುದು ಎಂದು ಶಂಕಿಸಲಾಗಿದೆ. ಆನೆ ವಿದ್ಯುತ್ ಕಂಬವನ್ನು ಮುರಿದಾಗ ಆನೆಗೆ ವಿದ್ಯುತ್ ಪ್ರವಹಿಸಿರಬಹುದು ಎನ್ನಲಾಗಿದೆ. ಮೇಲ್ನೋಟಕ್ಕೆ ಆನೆ ಕಂಬವನ್ನು ಹಾನಿಗೊಳಿಸಿದ್ದರಿಂದ ಅದರ ಸಾವಿಗೆ ಕಾರಣವಾದಂತೆ ತೋರುತ್ತಿದೆ.

ಈ ಮಧ್ಯೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಕಲಂ 9ರ ಅಡಿಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಮಡಿಕೇರಿ ಡಿಸಿಎಫ್ ಭಾಸ್ಕರ್ ಖಚಿತಪಡಿಸಿದ್ದಾರೆ. ಒಂದು ವಾರದ ಅವಧಿಯಲ್ಲಿ ಈ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶಿಸಿದ ಎರಡನೇ ಕಾಡಾನೆ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT