ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಯಿಂದ ಸತ್ಯ ಗೊತ್ತಾಗಲಿದೆ- ಜಿ ಪರಮೇಶ್ವರ

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ವರ್ಗಾವಣೆಗೆ ಎಸ್‌ಟಿ ಕಲ್ಯಾಣ ಇಲಾಖೆ ಸಚಿವ ಬಿ ನಾಗೇಂದ್ರ ಅವರು ಮೌಖಿಕ ಸೂಚನೆ ನೀಡಿದ್ದರೇ ಎಂಬುದು ಸಿಐಡಿ ತನಿಖೆಯಿಂದ ಬಹಿರಂಗವಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪದ ಮೇಲೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕ ಜೆ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಂ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಸಚಿವರ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಲಾಗಿದೆಯೇ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖಾಧಿಕಾರಿಗಳು ತನಿಖೆ ನಡೆಸುತ್ತಾರೆ. ಕೆಎಸ್ ಈಶ್ವರಪ್ಪ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಸಚಿವರ (ನಾಗೇಂದ್ರ) ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ. ತನಿಖೆ ಮುಗಿಯುವವರೆಗೆ ನಾವು ಕಾಯಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧ ನೇರ ಆರೋಪ ಮಾಡಿದ ನಂತರ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆಗಿನ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಐಟಿ ಕಂಪನಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಆರೋಪವಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT