ಭವಾನಿ ರೇವಣ್ಣ 
ರಾಜ್ಯ

ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಇಂದು ಆದೇಶ ನೀಡಿದೆ.

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಇಂದು ಆದೇಶ ನೀಡಿದೆ.

ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ಮೈಸೂರಿನ ಕೆಆರ್​ ಪೇಟೆಯಲ್ಲಿ ದಾಖಲಾಗಿರುವ ಕಿಡ್ನ್ಯಾಪ್ ಕೇಸ್​ನಲ್ಲಿ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಇಂದಿಗೆ ಜಾಮೀನು ಆದೇಶ ಕಾಯ್ದಿರಿಸಿತ್ತು. ಇದೀಗ ಕೋರ್ಟ್, ​ ಭವಾನಿ ರೇವಣ್ಣ ಅವರಿಗೆ ಜಾಮೀನು ತಿರಸ್ಕರಿಸಿದೆ. ಮತ್ತೊಂದೆಡೆ ಪುತ್ರ ಪ್ರಜ್ವಲ್ ರೇವಣ್ಣನನ್ನು​ ಕೋರ್ಟ್​ ಆರು ದಿನ ಎಸ್​ಐಟಿ ಕಸ್ಟಡಿಗೆ ನೀಡಿ ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ