ಉದ್ರಿಕ್ತರ ಗುಂಪಿನಿಂದ ಪೊಲೀಸ್ ವಾಹನಕ್ಕೆ ಹಾನಿ 
ರಾಜ್ಯ

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ

ಚನ್ನಗಿರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಿಐಡಿಯಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹಿತೇಂದ್ರ ತಿಳಿಸಿದರು.

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಗುಂಪು ಹಲ್ಲೆ ಹಾಗೂ ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ ವ್ಯಕ್ತಿಯ ಸಾವಿನ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ. ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ 108 ಮಂದಿಯಲ್ಲಿ ಇದುವರೆಗೆ 29 ಮಂದಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್ ಹಿತೇಂದ್ರ ಹೇಳಿದ್ದಾರೆ.

'ಕಸ್ಟಡಿ ಸಮಯದಲ್ಲಿ ಸಾವು ಸಂಭವಿಸಿದಾಗ ಮೃತರ ಕುಟುಂಬವು ಪೊಲೀಸರನ್ನು ಅನುಮಾನಿಸುವುದು ತುಂಬಾ ಸಾಮಾನ್ಯವಾಗಿದೆ. ಆದರೆ, ಅವರು ಸಾರ್ವಜನಿಕ ಆಸ್ತಿಗೆ ಹಾನಿಯುಂಟುಮಾಡಬಹುದು ಮತ್ತು ಕಾನೂನನ್ನು ಕೈಗೆತ್ತಿಕೊಳ್ಳಬಹುದು ಎಂದು ಇದರ ಅರ್ಥವಲ್ಲ. ಇದು ಅಪರಾಧ. ದಾಳಿಯಲ್ಲಿ ಭಾಗಿಯಾದವರನ್ನು ಮಾತ್ರ ಬಂಧಿಸಲಾಗುವುದು' ಎಂದು ಅವರು ಹೇಳಿದರು.

ಚನ್ನಗಿರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಿಐಡಿಯಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹಿತೇಂದ್ರ ತಿಳಿಸಿದರು.

'ಘಟನೆ ನಡೆದಾಗ, ನಾನು ರಜೆಯಲ್ಲಿದ್ದೆ. ಹಾಗಾಗಿ ಪರಿಸ್ಥಿತಿಯನ್ನು ಅವಲೋಕಿಸಲು ನಾನು ಈಗ ಬಂದಿದ್ದೇನೆ. ಪೊಲೀಸ್ ಸಿಬ್ಬಂದಿಯ ಅಮಾನತು ಕುರಿತು ಸರ್ಕಾರವೇ ನಿರ್ಧಾರ ಕೈಗೊಂಡಿದ್ದು, ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT