ಸಚಿವ ನಾಗೇಂದ್ರ, ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಸಾಂದರ್ಭಿಕ ಚಿತ್ರ 
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶುಕ್ರವಾರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶುಕ್ರವಾರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದೆ.

ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚನೆ ಮಾಡಲಾಗಿದೆ.

ಇನ್ನು ಎಸ್ಐಟಿ ವರದಿ ಆಧರಿಸಿಯೇ ಸಚಿವ ಬಿ.ನಾಗೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಆ ಮೂಲಕ SIT ವರದಿ ಬರುವವರೆಗೆ ಕಾದು ನೋಡಲು ಸರ್ಕಾರ ತೀರ್ಮಾನ ಮಾಡಿದೆ.

ಶಿವಮೊಗ್ಗದ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರನ್ ಅವರ ಪತ್ನಿ ದಾಖಲಿಸಿರುವ ದೂರು ಹಾಗೂ ಮೃತ ಅಧಿಕಾರಿಯ ಡೆತ್ ನೋಟ್ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಲಿದೆ.

ತನಿಖಾ ವರದಿಯನ್ನು ಆದಷ್ಟು ಬೇಗ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರನ್ ಅವರು ಭಾನುವಾರ ಸಂಜೆ ಆತ್ಮಹತ್ಯೆಗೆ ಶರಣಾದ ನಂತರ ನಿಗಮದ ಬ್ಯಾಂಕ್ ಖಾತೆಯಿಂದ 88.62 ಕೋಟಿ ರೂ.ಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮವಾಗಿ ಹಣವನ್ನು ವರ್ಗಾಯಿಸಲು ಸಚಿವ ಬಿ ನಾಗೇಂದ್ರ ಅವರು ಮೌಖಿಕ ಆದೇಶ ನೀಡಿದ್ದಾರೆ ಎಂಬ ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!