ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆ 
ರಾಜ್ಯ

ಮಾಧ್ಯಮಗಳಲ್ಲಿ ದಯವಿಟ್ಟು ಅವರ ಬಗ್ಗೆ ನಕಾರಾತ್ಮಕ ಪ್ರಚಾರ ಮಾಡಬೇಡಿ: ಪ್ರಜ್ವಲ್ ಪರ ವಕೀಲರ ಮನವಿ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಹಂತದಲ್ಲಿದ್ದು ಯಾವುದೇ ರೀತಿಯಲ್ಲಿ ನಕಾರಾತ್ಮಕ ಪ್ರಚಾರ ಮಾಡಬೇಡಿ ಎಂದು ಅವರ ಪರ ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಹಂತದಲ್ಲಿದ್ದು ಯಾವುದೇ ರೀತಿಯಲ್ಲಿ ನಕಾರಾತ್ಮಕ ಪ್ರಚಾರ ಮಾಡಬೇಡಿ ಎಂದು ಅವರ ಪರ ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಬೆಂಗಳೂರಿನ ಸಿಐಡಿ ಕಚೇರಿಗೆ ಕರೆತರಲಾಗಿತ್ತು.

ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಜ್ವಲ್ ಪರ ವಕೀಲ ಅರುಣ್, 'ಅನವಶ್ಯಕವಾಗಿ ಯಾವುದೇ ಋಣಾತ್ಮಕ ಪ್ರಚಾರ ಬೇಡ. ಪ್ರಜ್ವಲ್ ರೇವಣ್ಣ ಅವರು ಎಸ್‌ಐಟಿಗೆ ಸಹಕರಿಸಲು ಮುಂದಾಗಿದ್ದಾರೆ. ಎಸ್‌ಐಟಿಗೂ ಮುನ್ನ ಬೆಂಗಳೂರಿಗೆ ಬಂದಿರುವ ಅವರ ಸಂಪೂರ್ಣ ಉದ್ದೇಶ ತಮ್ಮ ಮಾತಿಗೆ ಬದ್ಧವಾಗಿರಬೇಕು ಎಂಬುದು, ಅವರು ತನಿಖೆಗೆ ಸಂಪೂರ್ಣ ಸಹಕರಿಸುತ್ತಾರೆ ಎಂದರು.

ನಿನ್ನೆ, ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಪ್ರಕಾರ, ಅವರನ್ನು ವಲಸೆ ಕೇಂದ್ರದಲ್ಲಿ ಇರಿಸಲಾಯಿತು. ಕಾರ್ಯವಿಧಾನದ ಪ್ರಕಾರ ಸರಿಯಾಗಿ ತನಿಖಾ ಸಂಸ್ಥೆಗಳಿಗೆ ಅವರನ್ನು ಹಸ್ತಾಂತರಿಸಲಾಗಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಇದು ಮೊದಲ ಪ್ರಕರಣ ಎಂದರು.

ಪ್ರಜ್ವಲ್ ರನ್ನು ಬಂಧಿಸಿದ 24 ಗಂಟೆಯೊಳಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT