ಪರಮೇಶ್ವರ್ ನಿವಾಸದ ಮುಂದೆ ಪ್ರತಿಭಟನೆ 
ರಾಜ್ಯ

ಗೃಹ ಸಚಿವ ಪರಮೇಶ್ವರ್ ನಿವಾಸದ ಮುಂದೆ ಹೈಡ್ರಾಮಾ: ಬಿಜೆಪಿ- ಜೆಡಿಎಸ್ ನಾಯಕರ ಪ್ರತಿಭಟನೆ, ಹಲವರ ಬಂಧನ

ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಕಾರ್ಯಕರ್ತರನ್ನು ಒಳಗೊಂಡ ಪ್ರತಿಭಟನಾಕಾರರು ಪರಮೇಶ್ವರ ಅವರ ನಿವಾಸದ ಆವರಣಕ್ಕೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ತುಮಕೂರು: ತುಮಕೂರಿನ ಗೊಲ್ಲಹಳ್ಳಿ ಗ್ರಾಮದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನಿವಾಸದಲ್ಲಿ ಗುರುವಾರ ಹೇಮಾವತಿ ನದಿ ನೀರನ್ನು ರಾಮನಗರ ಜಿಲ್ಲೆಗೆ ಬಿಡಲು ನಡೆಸುತ್ತಿರುವ 'ಎಕ್ಸ್‌ಪ್ರೆಸ್‌ ಕಾಲುವೆ’ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಬಿ.ಸುರೇಶ್‌ಗೌಡ, ಎಂ.ಟಿ.ಕೃಷ್ಣಪ್ಪ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ ಬಳಿಕ ಹೈ ಡ್ರಾಮಾ ನಡೆಯಿತು.

ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಕಾರ್ಯಕರ್ತರನ್ನು ಒಳಗೊಂಡ ಪ್ರತಿಭಟನಾಕಾರರು ಪರಮೇಶ್ವರ ಅವರ ನಿವಾಸದ ಆವರಣಕ್ಕೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಗಲಾಟೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದ್ದರು. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಮಧ್ಯ ಪ್ರವೇಶಿಸಿದರು. ಡಿಸಿಸಿ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಯಿತು.

ಕಳೆದ ವಾರ ಗುಬ್ಬಿ ತಾಲೂಕಿನ ಯೋಜನಾ ಸ್ಥಳದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಾಸನದ ಗೊರೂರು ಜಲಾಶಯದಿಂದ ತುಮಕೂರಿನ ಹೇಮತಿ ನದಿ ನೀರನ್ನು ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಿಗೆ ಹರಿಸಲು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹುಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಆರೋಪಿಸಿದರು.

ಪೈಪುಗಳ ಬದಲು ನೈಸರ್ಗಿಕ ಕಣಿವೆಯ ಮೂಲಕ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು. ಇದೇ ವೇಳೆ ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಯೋಜನೆ ಪರವಾಗಿ ಪ್ರತಿಭಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT