ನಟ ದರ್ಶನ್ 
ರಾಜ್ಯ

ಬೆಂಗಳೂರು: ಕೆಂಗೇರಿಯ BGS Global ಆಸ್ಪತ್ರೆಗೆ ನಟ ದರ್ಶನ್ ದಾಖಲು

ಪತ್ನಿ ವಿಜಯಲಕ್ಷ್ಮಿ ಜೊತೆಗೆ ಆಸ್ಪತ್ರೆಗೆ ಬಂದ ದರ್ಶನ್ ಅವರಿಗೆ ನರರೋಗ ತಜ್ಞ ಡಾ. ನವೀನ್ ಅಪ್ಪಾಜಿಗೌಡ ನೇತೃತ್ವದ ತಂಡ ಆರೋಗ್ಯ ತಪಾಸಣೆ ನಡೆಸಿದ್ದು, ಇಸಿಜಿ, ರಕ್ತದೊತ್ತಡ, ಮಧುಮೇಹ ಮತ್ತಿತರ ತಪಾಸಣೆ ಮಾಡಲಾಗಿದೆ.

ಬೆಂಗಳೂರು: ವೈದ್ಯಕೀಯ ಚಿಕಿತ್ಸೆ ಆಧಾರದ ಮೇಲೆ ಮಧ್ಯಂತರ ಜಾಮೀನು ಪಡೆದ ನಂತರ ನಟ ದರ್ಶನ್, ಬೆನ್ನುನೋವು, ಕಾಲು ನೋವಿನಿಂದಾಗಿ ಕೆಂಗೇರಿಯ BGS Global ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಜೊತೆಗೆ ಆಸ್ಪತ್ರೆಗೆ ಬಂದ ದರ್ಶನ್ ಅವರಿಗೆ ನರರೋಗ ತಜ್ಞ ಡಾ. ನವೀನ್ ಅಪ್ಪಾಜಿಗೌಡ ನೇತೃತ್ವದ ತಂಡ ಆರೋಗ್ಯ ತಪಾಸಣೆ ನಡೆಸಿದ್ದು, ಇಸಿಜಿ, ರಕ್ತದೊತ್ತಡ, ಮಧುಮೇಹ ಮತ್ತಿತರ ತಪಾಸಣೆ ಮಾಡಲಾಗಿದೆ.

ದರ್ಶನ್ ಅವರಿಗೆ ಬೆನ್ನು, ಕಾಲು ನೋವಿದೆ. ಅವರ ಎಡಗಾಲಿನ ಸೆಳೆತವಿದೆ. ಎಂ.ಆರ್.ಐ, ಎಕ್ಸ್ ರೇ ಹಾಗೂ ರಕ್ತ ಪರೀಕ್ಷೆ ಮಾಡಬೇಕಾಗಿದೆ. ಎಲ್ಲಾ ಪರೀಕ್ಷೆ ವರದಿಗಳು ಬರಲು ಎರಡು ದಿನ ಬೇಕಾಗಿದೆ. ವರದಿ ಬಂದ ನಂತರ ಶಸ್ತ್ರ ಚಿಕಿತ್ಸೆ ಮಾಡಬೇಕೋ ಅಥವಾ ಫಿಸಿಯೋಥೆರಫಿ ಚಿಕಿತ್ಸೆಯಿಂದ ವಾಸಿ ಮಾಡಬಹುದೋ ಎಂಬುದನ್ನು ನಿರ್ಧರಿಸಲಾಗುವುದು. ಸದ್ಯ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದ್ದು, ನೋವು ನಿವಾರಕ ಔಷಧಗಳನ್ನು ನೀಡಲಾಗಿದೆ ಎಂದು ನವೀನ್ ಅಪ್ಪಾಜಿಗೌಡ ತಿಳಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನನ್ನು ಬುಧವಾರ ನೀಡಿತ್ತು. ತದನಂತರ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ವಾಸವಿದ್ದ ಹೊಸಕೆರೆಹಳ್ಳಿಯ ಅಪಾರ್ಟ್ ಮೆಂಟ್ ಗೆ ತೆರಳಿದ್ದರು. ಶುಕ್ರವಾರ ಬಿಜೆಪಿ ಗ್ಲೋಬಲ್ ಆಸ್ಪತ್ರೆಯ ಹೊರಗಡೆಯೂ ಅಭಿಮಾನಿಗಳ ದಂಡೇ ನೆರೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು