ಬಸನಗೌಡ ಪಾಟೀಲ ಯತ್ನಾಳ್ 
ರಾಜ್ಯ

ದೇಶದ ಸಂಪನ್ಮೂಲ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವಕ್ಕೆ ವಿರುದ್ಧ; ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿಗೆ ಯತ್ನಾಳ್ ಪತ್ರ

ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ.

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಪತ್ರ ಬರೆದಿದ್ದೇನೆ.

ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ವಕ್ಫ್‌ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ, ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ. ಆದ್ದರಿಂದ, ಅದನ್ನು ಸದ್ಬಳಕೆ ಮಾಡುವ ಸದುದ್ದೇಶದಿಂದ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT