ಕನ್ನಡ ಮತ್ತು ಸಂಸ್ಕೃತಿ ಇಲಾಖೆ-ಸಂಗ್ರಹ ಚಿತ್ರ online desk
ರಾಜ್ಯ

ಸುವರ್ಣ ಮಹೋತ್ಸವ ಪ್ರಶಸ್ತಿ: ಸಮಾಜ ಸೇವಕರೊಬ್ಬರಿಗೆ ಪ್ರಶಸ್ತಿ ಬಂದಿದೆ ಎಂದು ತಪ್ಪು ಮಾಹಿತಿ ನೀಡಿ ಪೇಚಿಗೆ ಸಿಲುಕಿದ ಸಂಸ್ಕೃತಿ ಇಲಾಖೆ!

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ.

ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ ಮಾಡಿ, ಬೆಂಗಳೂರಿಗೆ ಬರುವಂತೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಆದರೆ ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಎಂದು ಹೇಳುವ ಮೂಲಕ ಅಧಿಕಾರಿಗಳು ಬಾಬು ಪಿಲಾರ್ ಗೆ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನೀವು ಪ್ರಶಸ್ತಿಗೆ ಭಾಜನರಾಗಿದ್ದೀರಿ ಎಂದು ಅ.31 ರಂದು ಬಾಬು ಪಿಲಾರ್ ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿಗೆ ಬಂದ ಪಿಲಾರ್ ಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಕೊಠಡಿಯನ್ನೂ ನೀಡಲಾಗಿತ್ತು. ಸಂಜೆ ಪ್ರಶಸ್ತಿ ವಿತರಣೆ ವೇಳೆ ಕೊನೇ ಕ್ಷಣದಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಕಣ್ತಪ್ಪಿನಿಂದ ತಪ್ಪಾಗಿದೆ ಕ್ಷಮಿಸಿ. ಬಾಬು ಪಿಲಾರ್ ಬದಲು ಬಾಬು‌ ಕಿಲಾರ್ ಆಗಬೇಕಿತ್ತು ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.

ಪಾರ್ಥಿವ ಶರೀರಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುವ ಮೂಲಕ ಬಾಬು ಪಿಲಾರ್ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT