ದಿನೇಶ್ ಗುಂಡೂರಾವ್ 
ರಾಜ್ಯ

ಕೇಂದ್ರದಿಂದ ತೆರಿಗೆ ಪಾಲು ಪಡೆಯುವಲ್ಲಿ ಕರ್ನಾಟಕಕ್ಕೆ ಅನ್ಯಾಯ: ದಿನೇಶ್ ಗುಂಡೂರಾವ್

ಹಣಕಾಸು ಆಯೋಗದಿಂದ ಸಿಗಬೇಕಾದ ಅನುದಾನದಲ್ಲಿ ತೀವ್ರ ಕಡಿತವಾಗಿದೆ. ಜಿಎಸ್ ಟಿಯಲ್ಲಿ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ. ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಾಗಿದೆ.

ಮಂಗಳೂರು: ದೇಶದಲ್ಲಿ ಎರಡನೇ ಅತಿ ದೊಡ್ಡ ಜಿಎಸ್‌ಟಿ ಸಂಗ್ರಹಿಸುವ ರಾಜ್ಯವಾಗಿದ್ದರೂ ಸಿಗಬೇಕಾದ ಪಾಲು ಸಿಗದ ಕಾರಣ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮುಂದುವರಿಸಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಣಕಾಸು ಆಯೋಗದಿಂದ ಸಿಗಬೇಕಾದ ಅನುದಾನದಲ್ಲಿ ತೀವ್ರ ಕಡಿತವಾಗಿದೆ. ಜಿಎಸ್ ಟಿಯಲ್ಲಿ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ. ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಾಗಿದೆ. ನಮ್ಮ ಶ್ರಮದ ಪಾಲನ್ನು ಯಾರೋ ಅನ್ಯಾಯವಾಗಿ ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ರಾಜ್ಯಗಳಿಗೆ ಬರಬಾರದು. ಕರ್ನಾಟಕ ಸರ್ಕಾರ ಇದನ್ನು ಪ್ರಶ್ನಿಸಿದೆ. ರಾಜ್ಯದ ಪರವಾಗಿ ಗಟ್ಟಿಯಾಗಿ ನಿಂತಿದೆ ಎಂದು ಅವರು ಹೇಳಿದರು.

ಜನಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ. ಆದರೆ ಶೈಕ್ಷಣಿಕವಾಗಿ ಹಿಂದುಳಿದಿರುವ ಮತ್ತು ಜನಸಂಖ್ಯಾ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಹಿಂದಿ ಮಾತನಾಡುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಲೋಕಸಭಾ ಸದಸ್ಯರನ್ನು ನೀಡಿ, ಕಡಿಮೆ ಜನಸಂಖ್ಯೆ ಇರುವ ದಕ್ಷಿಣ ರಾಜ್ಯಗಳಿಗೆ ಲೋಕಸಭಾ ಸದಸ್ಯರನ್ನು ಕಡಿಮೆ ಮಾಡಿ ಕೇಂದ್ರ ಮಟ್ಟದಲ್ಲಿ ದಕ್ಷಿಣ ಭಾರತ ಹಾಗೂ ಕರ್ನಾಟಕದ ಜನರ ಪ್ರಾತಿನಿಧ್ಯವನ್ನೇ ಇಲ್ಲವಾಗಿಸುವ ಕ್ರಮ ಕಳವಳಕಾರಿಯಾಗಿದೆ ಎಂದರು.

ಕರ್ನಾಟಕವನ್ನು ಸಮೃದ್ಧಗೊಳಿಸುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಸಮಾನ ಪ್ರಾಮುಖ್ಯತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಗುಲ್ಬರ್ಗದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಲವು ಯೋಜನೆಗಳ ಘೋಷಣೆ ಮಾಡಿದ್ದೇವೆ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 60 ಸಾಧಕರಿಗೆ ಹಾಗೂ 22 ಸಂಘ ಸಂಸ್ಥೆಗಳಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ವರ್ಣರಂಜಿತ ಮೆರವಣಿಗೆ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT