ಸಾಂದರ್ಭಿಕ ಚಿತ್ರ 
ರಾಜ್ಯ

ದೀಪಾವಳಿ ಸಂಭ್ರಮ: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 40 ಮಂದಿಗೆ ಗಾಯ!

ಶುಕ್ರವಾರ ಮಧ್ಯಾಹ್ನದವರೆಗೂ ಮಿಂಟೋ ಆಸ್ಪತ್ರೆಯಲ್ಲಿ ಆರು ಕಣ್ಣು ಗಾಯದ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಐವರು ಮಕ್ಕಳಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಲ್ಕು ಸುಟ್ಟ ಗಾಯದ ಪ್ರಕರಣಗಳು ವರದಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಈ ಬಾರಿ ಎರಡು ದಿನಗಳಿಂದ ದೀಪಾವಳಿಯನ್ನು ಸಡಗರ- ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಬೆಂಗಳೂರು ನಗರದಲ್ಲಿ ಸುಮಾರು 40 ಜನರು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನದವರೆಗೂ ಮಿಂಟೋ ಆಸ್ಪತ್ರೆಯಲ್ಲಿ ಆರು ಕಣ್ಣು ಗಾಯದ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಐವರು ಮಕ್ಕಳಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಲ್ಕು ಸುಟ್ಟ ಗಾಯದ ಪ್ರಕರಣಗಳು ವರದಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ನಗರದ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಕಣ್ಣು ಗಾಯದ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ಕಣ್ಣು ಸಂಬಂಧಿತ ಗಾಯಗಳಿಂದಾಗಿ ಒಟ್ಟು 15 ಪ್ರಕರಣಗಳು ವರದಿಯಾಗಿವೆ.

ಕಾರ್ನಿಯಲ್ ಸವೆತದಂತಹ ಸಣ್ಣ ಗಾಯದಿಂದ ಹಿಡಿದು ಹೈಫೀಮಾ ಮತ್ತು ಎಪಿತೀಲಿಯಲ್ ದೋಷ ವಿರುವ ತೀವ್ರ ತರವಾದ ಗಾಯದ ಪ್ರಕರಣಗಳು ದಾಖಲಾಗಿವೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ಹೇಳಿದರು.

ಇನ್ನೂ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಗುರುವಾರ ಎರಡು ತೀವ್ರತರವಾದ ಪ್ರಕರಣ, ಇಂದು 12 ಪ್ರಕರಣಗಳು ವರದಿಯಾಗಿವೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೇಖರ್ ಕಣ್ಣಿನ ಆಸ್ಪತ್ರೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 1 ರ ಸಂಜೆ 5 ರವರೆಗೆ ನಾಲ್ಕು ಕಣ್ಣಿನ ಗಾಯಗಳ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 13 ವರ್ಷದ ಬಾಲಕನೊಬ್ಬನ ಕಾರ್ನಿಯಲ್ ಗಾಯ ಹಾಗೂ ಏಳು ವರ್ಷದ ಬಾಲಕನೊಬ್ಬ ಗಾಯಗೊಂಡಿರುವುದು ಸೇರಿದೆ.

ಈ ಮಧ್ಯೆ ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ನಗರದಲ್ಲಿ ಪಟಾಕಿ ನಿಯಂತ್ರಣ ಉಲ್ಲಂಘನೆಯ 56 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಸುಪ್ರಿಂ ಕೋರ್ಟ್ ನಿರ್ದೇಶನದ ಪ್ರಕಾರ ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT