ಪ್ರಧಾನಿ ಮೋದಿ 
ರಾಜ್ಯ

ಗ್ಯಾರಂಟಿ ಯೋಜನೆಗಳ ಬಗ್ಗೆ ಖರ್ಗೆ ಸಲಹೆ: ಜನರ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ- ಪ್ರಧಾನಿ ಮೋದಿ ವಾಗ್ದಾಳಿ

ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅವುಗಳನ್ನು ಸರಿಯಾಗಿ ಜಾರಿಗೆ ತರುವುದು ಕಠಿಣ ಅಥವಾ ಅಸಾಧ್ಯ ಎನ್ನುವುದು ಕಾಂಗ್ರೆಸ್ ಗೆ ಅರಿವಾಗುತ್ತಿದೆ.

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆಯನ್ನು ಪರಿಶೀಲಿಸುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಜೆಟ್​ನಲ್ಲಿ ಏನಿದೆ ಅದರಂತೆ ಗ್ಯಾರಂಟಿ ಯೋಜನೆ ಕೊಡಿ ಎಂದು ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ ಬಳಿಕ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅವುಗಳನ್ನು ಸರಿಯಾಗಿ ಜಾರಿಗೆ ತರುವುದು ಕಠಿಣ ಅಥವಾ ಅಸಾಧ್ಯ ಎನ್ನುವುದು ಕಾಂಗ್ರೆಸ್ ಗೆ ಅರಿವಾಗುತ್ತಿದೆ. ಪ್ರಚಾರದ ವೇಳೆಯಲ್ಲಿ ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ಆಗುವುದಿಲ್ಲ ಎನ್ನುವುದು ಅವರಿಗೆ ತಿಳಿಸಿದೆ.ಈಗ ಅವರು ಜನರ ಮುಂದೆ ಕೆಟ್ಟದಾಗಿ ಬೆತ್ತಲಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ, ಹಿಮಾಚಲ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳನ್ನೊಮ್ಮೆ ನೋಡಿ ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಸ್ಥಿತಿ ಹದಗೆಡುತ್ತಿದೆ. ಅವರು ಗ್ಯಾರಂಟಿಗಳು ಎಂದು ಹೇಳಿಕೊಳ್ಳುವ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು. ಇದು ರಾಜ್ಯದ ಜನತೆಗೆ ಅವರು ಮಾಡುತ್ತಿರುವ ಮಹಾಮೋಸ. ಬಡವರು, ಯುವಕರು, ರೈತರು ಹಾಗೂ ಮಹಿಳೆಯರು ಇಂತಹ ರಾಜಕೀಯದ ಸಂತ್ರಸ್ತರು. ಅವರಿಗೆ ನೀಡಲಾದ ಭರವಸೆಗಳ ಪ್ರಯೋಜನ ಸಿಗುತ್ತಿಲ್ಲ. ಅಲ್ಲದೆ ಈಗಿರುವ ಯೋಜನೆಗಳನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ, ಹಿಮಾಚಲ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳನ್ನೊಮ್ಮೆ ನೋಡಿ ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಸ್ಥಿತಿ ಹದಗೆಡುತ್ತಿದೆ. ಅವರು ಗ್ಯಾರಂಟಿಗಳು ಎಂದು ಹೇಳಿಕೊಳ್ಳುವ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು. ಇದು ರಾಜ್ಯದ ಜನತೆಗೆ ಅವರು ಮಾಡುತ್ತಿರುವ ಮಹಾಮೋಸ. ಬಡವರು, ಯುವಕರು, ರೈತರು ಹಾಗೂ ಮಹಿಳೆಯರು ಇಂತಹ ರಾಜಕೀಯದ ಸಂತ್ರಸ್ತರು. ಅವರಿಗೆ ನೀಡಲಾದ ಭರವಸೆಗಳ ಪ್ರಯೋಜನ ಸಿಗುತ್ತಿಲ್ಲ. ಅಲ್ಲದೆ ಈಗಿರುವ ಯೋಜನೆಗಳನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT