ಗಾಯಗೊಂಡ ನಿಖಿಲ್ ಅವರನ್ನು ಕಾರ್ಯಕರ್ತರು ಉಪಚರಿಸುತ್ತಿರುವುದು. 
ರಾಜ್ಯ

ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ನಾಯಕ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಕಾರ್ಯಕರ್ತರು ಕೂಡಲೇ ನಿಖಿಲ್‌ ಅವರ ಸಹಾಯಕ್ಕೆ ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಘಟನೆಯಲ್ಲಿ ನಿಖಿಲ್ ಅವರ ಬಲಗಾಲಿಗೆ ಪೆಟ್ಟಾಗಿದ್ದರೂ, ನಿಖಿಲ್ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಮತ್ತೆ ಪ್ರಚಾರ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ