ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಂಬಳಿ ಹೊದಿಕೆ ಬಳಸಿದ್ದಕ್ಕಾಗಿ ಕ್ಷೌರಿಕನ ಕೊಲೆ; ಆರೋಪಿ ಬಂಧನ

ಈತ ಕ್ಷೌರಿಕ ವೃತ್ತಿ ಮಾಡುತ್ತಿದ್ದ, ದೇಗುಲದ ಒಳಗಡೆಯೇ ಕೆಲಸ ಮಾಡುತ್ತಿದ್ದು, ದೇವಸ್ಥಾನದಲ್ಲಿ ಹರಕೆ ಕಟ್ಟಿಕೊಂಡು ಬರುವ ಭಕ್ತರಿಗೆ ಮುಡಿ ತೆಗೆಯುತ್ತಿದ್ದ. ಆತನ ಪತ್ನಿ, ಪುತ್ರ ಹಾಗೂ ಇತರ ಕುಟುಂಬ ಸದಸ್ಯರು ಆವಲಹಳ್ಳಿಯಲ್ಲಿ ವಾಸವಾಗಿದ್ದರು.

ಬೆಂಗಳೂರು: ಕೆಆರ್ ಪುರಂ ಬಳಿಯ ಆವಲಹಳ್ಳಿಯಲ್ಲಿ 54 ವರ್ಷದ ವ್ಯಕ್ತಿಯನ್ನು ದೇವಸ್ಥಾನದೊಳಗೆ ಕೊಲೆ ಮಾಡಲಾಗಿದೆ ಆವಲಹಳ್ಳಿಯ ಮುನೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರು ಜಿಲ್ಲಾ ಪೊಲೀಸ್ ಠಾಣೆಯ ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಈತ ಕ್ಷೌರಿಕ ವೃತ್ತಿ ಮಾಡುತ್ತಿದ್ದ, ದೇಗುಲದ ಒಳಗಡೆಯೇ ಕೆಲಸ ಮಾಡುತ್ತಿದ್ದು, ದೇವಸ್ಥಾನದಲ್ಲಿ ಹರಕೆ ಕಟ್ಟಿಕೊಂಡು ಬರುವ ಭಕ್ತರಿಗೆ ಮುಡಿ ತೆಗೆಯುತ್ತಿದ್ದ. ಆತನ ಪತ್ನಿ, ಪುತ್ರ ಹಾಗೂ ಇತರ ಕುಟುಂಬ ಸದಸ್ಯರು ಆವಲಹಳ್ಳಿಯಲ್ಲಿ ವಾಸವಾಗಿದ್ದರು.

ಆರೋಪಿಯನ್ನು ಮಂಜುನಾಥ್ ಅಲಿಯಾಸ್ ಕೃಷ್ಣ ಮೂರ್ತಿ (38) ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುಮಾರ್ ಮತ್ತು ಮಂಜುನಾಥ್ ಇಬ್ಬರೂ ದೇವಸ್ಥಾನದ ಆವರಣದಲ್ಲಿ ಮಲಗಿದ್ದರು. ಕುಮಾರ್ ಮಂಜುನಾಥ್ ಹೊದಿಕೆಯನ್ನು ಬಳಸಿದ್ದರು ಎಂದು ಹೇಳಲಾಗಿದೆ, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಜಗಳದ ನಂತರ, ಕುಮಾರ್, ಕಂಬಳಿಯನ್ನು ಹಿಂತಿರುಗಿಸದೆ, ಚಳಿಯಾಗಿದ್ದರಿಂದ ಕಂಬಳಿ ಹೊದ್ದಕೊಂಡು ಮಲಗಿದ್ದ. ಕುಮಾರ್ ಮಲಗಿದ್ದಾಗ ಮಂಜುನಾಥ್ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆವಲಹಳ್ಳಿಯ ವೀರಗೋಪುರದ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT