ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್; ಇಬ್ಬರಿಂದ ಯುವತಿ ಮೇಲೆ ಅತ್ಯಾಚಾರ

ನಗರದ ಪಬ್ ವೊಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಆಕೆಗೆ ಆಮಿಷವೊಡ್ಡುವ ಮೂಲಕ ಪ್ರತ್ಯೇಕ ಸ್ಥಳವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಖ್ಯಾತಿಯ ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. ಪಬ್ ವೊಂದರಲ್ಲಿ ಭೇಟಿಯಾದ ಇಬ್ಬರು ವ್ಯಕ್ತಿಗಳು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದಾಗಿ ವರದಿಯಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಗರದ ಪಬ್ ವೊಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಆಕೆಗೆ ಆಮಿಷವೊಡ್ಡುವ ಮೂಲಕ ಪ್ರತ್ಯೇಕ ಸ್ಥಳವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. 2021 ರ ಆಗಸ್ಟ್ 24 ರಂದು ನಡೆದ ಗ್ಯಾಂಗ್ ರೇಪ್ ಘಟನೆ ನಂತರ ಮತ್ತೆ ಅಂತಹುದೇ ಘಟನೆ ಮರುಕಳಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಆರೋಪಿ ಕೊಡಗು ಮೂಲದವನಾದರೆ, ಇನ್ನೊಬ್ಬ ಮೈಸೂರಿನವನು ಎಂದು ಹೇಳಲಾಗಿದೆ. ಸಂತ್ರಸ್ತ ಯುವತಿಯು ಮೈಸೂರಿನಲ್ಲಿ ನೆಲೆಸಿದ್ದರಾ? ಅಥವಾ ಮಡಿಕೇರಿಯಿಂದ ಆಕೆಯನ್ನು ಅಪಹರಣ ಮಾಡಿಕೊಂಡು ಮೈಸೂರಿಗೆ ಕರೆತಂದು, ಆರೋಪಿಗಳು ಈ ಹೀನ ಕೃತ್ಯವನ್ನ ಎಸಗಿದ್ದಾರಾ ಅನ್ನೋದರ ಬಗ್ಗೆ ನಿಖರ ಮಾಹಿತಿ ತಿಳಿದು ಬರಬೇಕಿದೆ.

ಕಳೆದ ಕೆಲ ವರ್ಷಗಳ ಹಿಂದೆ ಅಂದರೆ 2021ರಲ್ಲಿ ಕಾಲೇಜು ಅವಧಿ ಮುಗಿದ ನಂತರ ಪಾರ್ಕ್ ವೊಂದರಲ್ಲಿ ಸ್ನೇಹಿತನೊಂದಿಗೆ ಕುಳಿತಿದ್ದ ಸಂತ್ರಸ್ತೆಯನ್ನು ಚಾಮುಂಡಿ ಬೆಟ್ಟದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಏಳು ಮಂದಿ ಕಿರಾತಕರು ಸಾಮೂಹಿಕ ಗ್ಯಾಂಗ್ ರೇಪ್ ನಡೆಸಿದ್ದರು. ಅಲ್ಲದೇ ರೂ. 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಆಕೆಯ ಸ್ನೇಹಿತನನ್ನು ಮನಸೋ ಇಚ್ಚೆ ಥಳಿಸಿದ್ದರು. ಬಳಿಕ ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ತಮಿಳುನಾಡಿನ ಏಳು ಮಂದಿಯನ್ನು ಬಂಧಿಸಿ, ಘಟನೆ ಸಂಬಂಧ 1,499 ಪುಟಗಳ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೆ ಗ್ಯಾಂಗ್ ರೇಪ್ ಘಟನೆ ನಡೆದಿದ್ದು, ಮೈಸೂರಿನ ಜನತೆ ಆತಂಕಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT