ಎಂಬಿ ಪಾಟೀಲ್ 
ರಾಜ್ಯ

ಹೂಡಿಕೆ ಯೋಜನೆಗಳ ಕ್ಷಿಪ್ರ ಅನುಮೋದನೆಗೆ ಮೈಕ್ರೋಸಾಫ್ಟ್‌ನಿಂದ ನೂತನ ಸಾಫ್ಟ್‌ವೇರ್: ಎಂಬಿ ಪಾಟೀಲ್‌

ಗರಿಷ್ಠ 100 ದಿನಗಳೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆ ನೀಡುವ ಗುರಿ ಹೊಂದಲಾಗಿದ್ದು, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನೂತನ ಸಾಫ್ಟ್‌ವೇರ್ ಲೋಕಾರ್ಪಣೆ

ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಮೈಕ್ರೋಸಾಫ್ಟ್ ಕಂಪನಿ ನೆರವಿನಿಂದ ನೂತನ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ಬಿ ಪಾಟೀಲ್ ತಿಳಿಸಿದ್ದಾರೆ.

ಗರಿಷ್ಠ 100 ದಿನಗಳೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆ ನೀಡುವ ಗುರಿ ಹೊಂದಲಾಗಿದ್ದು, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನೂತನ ಸಾಫ್ಟ್‌ವೇರ್ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಹೊರೆಯ ಕೆಲವು ರಾಜ್ಯಗಳಲ್ಲಿ ಕೈಗಾರಿಕಾ ಹೂಡಿಕೆ ಯೋಜನೆಗಳಿಗೆ 60 - 70 ದಿನಗಳಲ್ಲಿ ಅನುಮೋದನೆಯನ್ನೂ ನೀಡಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಸರಾಸರಿ 300 ದಿನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದನ್ನು 60-70 ದಿನಗಳಿಗೆ ಕಡಿಮೆಗೊಳಿಸಬೇಕೆಂಬುದು ತಮ್ಮ‌ ಗುರಿಯಾಗಿದೆ. ಇಲ್ಲದೆ ಹೋದರೆ ನಾವು ಹೂಡಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಕೈಗಾರಿಕಾ ಯೋಜನೆಗಳಿಗೆ ರಾಜ್ಯದಲ್ಲಿ ಅಗ್ನಿಶಾಮಕ, ಕಾನೂನು, ಅರಣ್ಯ ಮುಂತಾದ 33 ಇಲಾಖೆಗಳ ಅನುಮೋದನೆ ಬೇಕಾಗುತ್ತದೆ. ಜೊತೆಗೆ 147 ಬಗೆಯ ಸೇವೆಗಳಿವೆ. ಇವನ್ನು ಒಂದೇ ಕಡೆ ತರಬೇಕಾಗಿದೆ. ಇದನ್ನು ನೂತನ ಸಾಫ್ಟ್‌ವೇರ್ ಸುಗಮಗೊಳಿಸಲಿದೆ. ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಚಿವರು ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಸಾಪ್ಟ್ ವೇರ್ ಬಳಕೆ ಕುರಿತು ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಹೊಸ ಸಾಪ್ಟ್ ವೇರ್ ಗೆ 'ಉಮಾ' (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂದು ಹೆಸರು ಇಟ್ಟಿದ್ದು, ಕೇವಲ ಕನ್ನಡ, ಇಂಗ್ಲಿಷ್ ಮಾತ್ರವಲ್ಲದೆ ಪ್ರಪಂಚದ ಎಲ್ಲಾ ಪ್ರಮುಖ ಭಾಷೆಗಳಲ್ಲೂ ಮಾಹಿತಿ ಲಭ್ಯವಾಗಲಿದೆ. ಇದಕ್ಕೆ ಕೃತಕ ಬುದ್ಧಿಮತ್ತೆಯ ನೆರವು ಕೂಡ ಪಡೆಯಲಾಗಿದೆ. ಜತೆಗೆ ಧ್ವನಿ ಮಾಧ್ಯಮದಲ್ಲೂ ಕೂಡ ಉದ್ಯಮಿಗಳು ತಮ್ಮಿಚ್ಛೆಯ ಭಾಷೆಯಲ್ಲಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT