ಹೆಚ್ ಕೆ ಪಾಟೀಲ್ 
ರಾಜ್ಯ

ಬೆಳಗಾವಿ ಜಂಟಿ ಅಧಿವೇಶನ: ಅಮೆರಿಕಾ ಮಾಜಿ ಅಧ್ಯಕ್ಷ ಒಬಾಮಾಗೆ ಸರ್ಕಾರ ಆಹ್ವಾನ- HK ಪಾಟೀಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ನ.5 ರಂದು ಬೆಳಗಾವಿಗೆ ಭೇಟಿ ನೀಡಲಿದೆ.

ಗದಗ: ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಸಭೆಗೆ 100 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಜಂಟಿ ಅಧಿವೇಶನಕ್ಕೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್​ ಒಬಾಮ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್‌.ಕೆ. ಪಾಟೀಲ್ ಅವರು ಸೋಮವಾರ ಹೇಳಿದರು.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ನ.5 ರಂದು ಬೆಳಗಾವಿಗೆ ಭೇಟಿ ನೀಡಲಿದೆ. 2025ರ ಅಕ್ಟೋಬರ್ 2 ರವರೆಗೆ ಶತಮಾನೋತ್ಸವ ಮಾಡಲಾಗುತ್ತದೆ ಎಂದು ಹೇಳಿದರು.

ಸಮಿತಿಯು ವಿಶೇಷ ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಕಾರ್ಯಕ್ರಮಕ್ಕೆ ಗಾಂಧೀಜಿಯವರ ಅನುಯಾಯಿ ಆಗಿರುವ ಮತ್ತು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಅಹ್ವಾನಿಸಲಾಗಿದೆ. ಒಬಾಮಾ ಅವರು ನೀಡುವ ದಿನಾಂಕ ನೋಡಿಕೊಂಡು ಜಂಟಿ ಅಧಿವೇಶನ ದಿನಾಂಕವನ್ನು ನಿರ್ಧರಿಸಲಾಗುವುದು.

ಗಾಂಧೀಜಿ ಅವರು ಕೇವಲ ಭಾರತದ ನಾಯಕನಲ್ಲ. ವಿಶ್ವ ನಾಯಕ ಎಂದು ಸಾರುವ ಗಾಂಧಿ ಅನುಯಾಯಿ, ಅಭಿಮಾನಿಗೆ ಆಹ್ವಾನ ನೀಡಿದ್ದೇವೆ. ಇದೊಂದು ಉತ್ತಮವಾದ ಕಾರ್ಯಕ್ರಮ ಆಗಲಿದೆ ಎಂದು ತಿಳಿಸಿದರು.

ಗಾಂಧೀಜಿ ಅವರು ರಾಜ್ಯದ 120 ಸ್ಥಳಗಳಿಗೆ ಭೇಟಿ ನೀಡಿದ್ದು, ಅವರು ಭೇಟಿ ನೀಡಿದ ರಾಜ್ಯದ 40 ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು. ಬೇರೆ ಬೇರೆ ಜಿಲ್ಲೆಗಳು ರಥಯಾತ್ರೆಯ ಜ್ಯೋತಿಗಳು ಡಿಸೆಂಬರ್ 26 ಮತ್ತು 27ಕ್ಕೆ ಬೆಳಗಾವಿಗೆ ತಲುಪಲಿವೆ. ಬಳಿಕ ಯುವ, ಮಹಿಳಾ, ಸಾಮರಸ್ಯ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT