ಸಾಂದರ್ಭಿಕ ಚಿತ್ರ 
ರಾಜ್ಯ

ಯುವತಿಯರ Swimming ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಸಾವು

ಅಕ್ಟೋಬರ್ 26 ರಂದು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಾಲೇಜಿನಲ್ಲಿ ದೀಪಾವಳಿ ರಜೆ ನೀಡಿದ್ದರಿಂದ ಹೊರಗೆ ಹೋಗಲು ನಿರ್ಧರಿಸಿದ್ದರು.

ಬೆಂಗಳೂರು: ವೀಕೆಂಡ್ ಕಳೆಯಲು ರಾಮನಗರ ಬಳಿಯ ನಗರದ ಹೊರವಲಯದಲ್ಲಿರುವ ಫಾರ್ಮ್‌ಹೌಸ್‌ಗೆ ತೆರಳಿದ್ದ ಬಸವೇಶ್ವರನಗರದ ಏಳು ಮಂದಿ ಪದವಿ ವಿದ್ಯಾರ್ಥಿಗಳ ಗುಂಪಿನ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಅಕ್ಟೋಬರ್ 26 ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದೀಗ ಹಲ್ಲೆಗೊಳಗಾದವರಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪ್ರಕರಣ ಪೊಲೀಸರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಪುನೀತ್ (21) ಮೃತ ವಿದ್ಯಾರ್ಥಿ. ಈತ ಬಸವೇಶ್ವರನಗರದ ಖಾಸಗಿ ಕಾಲೇಜಿನಲ್ಲಿ ಬಿಕಾಂ ವಿದ್ಯಾರ್ಥಿಯಾಗಿದ್ದ, ಅಕ್ಟೋಬರ್ 26 ರಂದು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಾಲೇಜಿನಲ್ಲಿ ದೀಪಾವಳಿ ರಜೆ ನೀಡಿದ್ದರಿಂದ ಹೊರಗೆ ಹೋಗಲು ನಿರ್ಧರಿಸಿದ್ದರು.

ವಿದ್ಯಾರ್ಥಿಯೊಬ್ಬನಿಗೆ ಮಾಲೀಕನ ಪರಿಚಯವಿದ್ದ ಕಾರಣ ಅವರು ತೋಟದ ಮನೆಗೆ ಹೋಗಿದ್ದರು. ಈ ವೇಳೆ ತಂಡದಲ್ಲಿದ್ದ ಇಬ್ಬರು ಹುಡುಗಿಯರು ಅಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಇತರರು ಅಂತಕ್ಷರಿ ಆಡುತ್ತಿದ್ದರು. ಹೊರಗಿನಿಂದ ಯಾರೋ ಬಾಗಿಲು ಬಡಿಯುತ್ತಿದ್ದಂತೆ ಒಬ್ಬ ವಿದ್ಯಾರ್ಥಿನಿ ಎದ್ದು ಹೋಗಿ ಬಾಗಿಲು ತೆರೆದಿದ್ದಾಳೆ.

ಈ ವೇಳೆ ಸ್ಥಳೀಯರು ಎಂದು ಹೇಳಿಕೊಂಡು ಮೂವರು ಆರೋಪಿಗಳು ಒಳಗೆ ನುಗ್ಗಿ ನಮ್ಮನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೂಗಾಡಲು ಪ್ರಾರಂಭಿಸಿದ್ದು, ಇಲ್ಲಿಗೆ ಬರಲು ನಿಮಗೆ ಅನುಮತಿ ನೀಡಿದವರು ಯಾರು ಎಂದು ಕೇಳಿ ನಿಂದಿಸಲು ಪ್ರಾರಂಭಿಸಿದ್ದಾರೆ. ಬಳಿಕ ಆರೋಪಿಗಳು ಹುಡುಗಿಯರ ಫೋಟೋ ತೆಗೆಯಲು ಪ್ರಾರಂಭಿಸಿದ್ದಾರೆ. ಇತರ ವಿದ್ಯಾರ್ಥಿಗಳು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಮರದ ದಿಮ್ಮಿಗಳಿಂದ ವಿದ್ಯಾರ್ಥಿಗಳ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಕೊನೆಯುಸಿರೆಳೆದಿದ್ದಾನೆ.

ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳಾದ ಚಂದ್ರು, ನಾಗೇಶ್ ಮತ್ತು ಮುರಳಿ ಎಂಬುವವರನ್ನು ಬಂಧನಕ್ಕೊಳಪಡಿಸಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ಕೊಲೆ ಪ್ರಕರಣ ಸೇರಿದಂತೆ ಇತರೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT