ಬಂಧತ ಆರೋಪಿಗಳು. 
ರಾಜ್ಯ

ದೀಪಾವಳಿ ಸಮಯದಲ್ಲಿ ಇಸ್ಪೀಟ್‌ ಜೂಜಾಟ: ಬಳ್ಳಾರಿಯಲ್ಲಿ 130 ಪ್ರಕರಣ, 810 ಮಂದಿ ಬಂಧನ

ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆ, ನೆರೆಯ ಆಂಧ್ರದ ಭಾಗಗಳಿಂದ ಸಹ ಇಸ್ಟೀಟ್‌ ಜೂಜಾಟವಾಡಲು ಜಿಲ್ಲೆಯತ್ತ ಕೆಲವರು ಆಗಮಿಸುವುದು ಸಾಮಾನ್ಯವಾಗಿದೆ.

ಬಳ್ಳಾರಿ: ದೀಪಾವಳಿ ಹಬ್ಬದ ಸಮಯದಲ್ಲಿ ಜಿಲ್ಲಾದ್ಯಂತ ಇಸ್ಪೀಟ್‌ ಜೂಜಾಟದಲ್ಲಿ ತೊಡಗಿರುವವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 130 ಪ್ರಕರಣ ದಾಖಲಿಸಿ, ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ 810 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.

ದೀಪಾವಳಿ ಹಬ್ಬ ಎದುರಾಗುತ್ತಿದ್ದಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಇಸ್ಪೀಟ್‌ ಜೂಜಾಟದ ಅಡ್ಡೆ ನಿರ್ಮಾಣವಾಗುತ್ತವೆ. ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆ, ನೆರೆಯ ಆಂಧ್ರದ ಭಾಗಗಳಿಂದ ಸಹ ಇಸ್ಟೀಟ್‌ ಜೂಜಾಟವಾಡಲು ಜಿಲ್ಲೆಯತ್ತ ಕೆಲವರು ಆಗಮಿಸುವುದು ಸಾಮಾನ್ಯವಾಗಿದೆ. ಹೀಗಾಗಿ, ಕಾನೂನು ಬಾಹಿರ ಜೂಜಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಳೆದ ಅ.30ರಿಂದ ನವೆಂಬರ್ 3ರರವರೆಗೆ ಜಿಲ್ಲಾದ್ಯಂತ ಪೊಲೀಸರು ದಾಳಿ ನಡೆಸಿ 810 ಮಂದಿಯನ್ನು ಬಂಧನಕ್ಕೊಳಪಡಿಸಿ, 16 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿವಿಧ ಠಾಣೆಗಳಲ್ಲಿ 130 ಪ್ರಕರಣಗಳು ದಾಖಲಾಗಿವೆ.

ಪದೇ ಪದೇ ಎಚ್ಚರಿಕೆ ನೀಡಿದರೂ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜೂಜಾಟ ಹೆಚ್ಚಾಗುತ್ತವೆ. ಈಗಾಗಲೇ ಸಾಕಷ್ಟು ಮಂದಿ ಕಂಬಿ ಹಿಂದೆ ಇದ್ದಾರೆ. ಕೆಲವರು ಜೂಜಾಟಕ್ಕೆ ಕೆಲವು ಗಂಟೆಗಳ ಕಾಲ ಮನೆಗಳನ್ನೇ ನೀಡುತ್ತಿರುವುದೂ ಕಂಡು ಬಂದಿದೆ. ಇದೀಗ ಬಂಧನಕ್ಕೊಳಗಾಗಿರುವವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT