ಬಂಧತ ಆರೋಪಿಗಳು. 
ರಾಜ್ಯ

ದೀಪಾವಳಿ ಸಮಯದಲ್ಲಿ ಇಸ್ಪೀಟ್‌ ಜೂಜಾಟ: ಬಳ್ಳಾರಿಯಲ್ಲಿ 130 ಪ್ರಕರಣ, 810 ಮಂದಿ ಬಂಧನ

ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆ, ನೆರೆಯ ಆಂಧ್ರದ ಭಾಗಗಳಿಂದ ಸಹ ಇಸ್ಟೀಟ್‌ ಜೂಜಾಟವಾಡಲು ಜಿಲ್ಲೆಯತ್ತ ಕೆಲವರು ಆಗಮಿಸುವುದು ಸಾಮಾನ್ಯವಾಗಿದೆ.

ಬಳ್ಳಾರಿ: ದೀಪಾವಳಿ ಹಬ್ಬದ ಸಮಯದಲ್ಲಿ ಜಿಲ್ಲಾದ್ಯಂತ ಇಸ್ಪೀಟ್‌ ಜೂಜಾಟದಲ್ಲಿ ತೊಡಗಿರುವವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 130 ಪ್ರಕರಣ ದಾಖಲಿಸಿ, ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ 810 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.

ದೀಪಾವಳಿ ಹಬ್ಬ ಎದುರಾಗುತ್ತಿದ್ದಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಇಸ್ಪೀಟ್‌ ಜೂಜಾಟದ ಅಡ್ಡೆ ನಿರ್ಮಾಣವಾಗುತ್ತವೆ. ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆ, ನೆರೆಯ ಆಂಧ್ರದ ಭಾಗಗಳಿಂದ ಸಹ ಇಸ್ಟೀಟ್‌ ಜೂಜಾಟವಾಡಲು ಜಿಲ್ಲೆಯತ್ತ ಕೆಲವರು ಆಗಮಿಸುವುದು ಸಾಮಾನ್ಯವಾಗಿದೆ. ಹೀಗಾಗಿ, ಕಾನೂನು ಬಾಹಿರ ಜೂಜಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಳೆದ ಅ.30ರಿಂದ ನವೆಂಬರ್ 3ರರವರೆಗೆ ಜಿಲ್ಲಾದ್ಯಂತ ಪೊಲೀಸರು ದಾಳಿ ನಡೆಸಿ 810 ಮಂದಿಯನ್ನು ಬಂಧನಕ್ಕೊಳಪಡಿಸಿ, 16 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿವಿಧ ಠಾಣೆಗಳಲ್ಲಿ 130 ಪ್ರಕರಣಗಳು ದಾಖಲಾಗಿವೆ.

ಪದೇ ಪದೇ ಎಚ್ಚರಿಕೆ ನೀಡಿದರೂ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜೂಜಾಟ ಹೆಚ್ಚಾಗುತ್ತವೆ. ಈಗಾಗಲೇ ಸಾಕಷ್ಟು ಮಂದಿ ಕಂಬಿ ಹಿಂದೆ ಇದ್ದಾರೆ. ಕೆಲವರು ಜೂಜಾಟಕ್ಕೆ ಕೆಲವು ಗಂಟೆಗಳ ಕಾಲ ಮನೆಗಳನ್ನೇ ನೀಡುತ್ತಿರುವುದೂ ಕಂಡು ಬಂದಿದೆ. ಇದೀಗ ಬಂಧನಕ್ಕೊಳಗಾಗಿರುವವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT