ದಾಖಲೆ ಇಲ್ಲದ 31.79 ಲಕ್ಷ ರೂ ಮೌಲ್ಯದ ಹೊಸ ನೋಟು ಹೊಂದಿದ್ದ 8 ಜನರ ಬಂಧನ 
ರಾಜ್ಯ

ಸಂಡೂರು ಉಪಚುನಾವಣೆ: ದಾಖಲೆ ಇಲ್ಲದ 27.50 ಲಕ್ಷ ರೂ ನಗದು ಹಣ ವಶಕ್ಕೆ

ಸಂಡೂರು ಉಪಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಿದ್ದು, ಪರಿಶೀಲನೆಯನ್ನು ತೀವ್ರಗೊಳಿಸಿದ್ದಾರೆ.

ಬಳ್ಳಾರಿ: ಸಂಡೂರು ವ್ಯಾಪ್ತಿಯ ಡಿ.ಬಸಾಪುರ ಗ್ರಾಮದ ಬಳಿ ಇರುವ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಚೆಕ್‌ಪೋಸ್ಟ್‌ನಲ್ಲಿ ದಾಖಲೆಗಳು ಇಲ್ಲದೇ ಸಾಗಿಸಲಾಗುತ್ತಿದ್ದ 27.50 ಲಕ್ಷ ರೂ. ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂಡೂರು ಉಪಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಿದ್ದು, ಪರಿಶೀಲನೆಯನ್ನು ತೀವ್ರಗೊಳಿಸಿದ್ದಾರೆ.

ಚೆಕ್‌ಪೋಸ್ಟ್ ಮೂಲಕ ಹಾದುಹೋಗುವ ಪ್ರತಿಯೊಂದು ವಾಹನವನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಈ ವೇಳೆ ದಾಖಲೆ ಇಲ್ಲದ ನಗದು ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗುತ್ತಿದೆ. ವಾಹನ ಮಾಲೀಕರನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ನೀಡಲಿಲ್ಲ. ಇಸಿಐ ಮಾರ್ಗಸೂಚಿಗಳ ಪ್ರಕಾರ ನಾವು ವಶಪಡಿಸಿಕೊಂಡ ಹಣವನ್ನು ಐಟಿ ಇಲಾಖೆಗೆ ಹಸ್ತಾಂತರಿಸಿದ್ದೇವೆ. ಚುನಾವಣಾ ಸಮಯದಲ್ಲಿ ಹೆಚ್ಚಿನ ಮೊತ್ತದ ಹಣವನ್ನು ಸಾಗಿಸುವ ಜನರು ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ದಾಖಲೆ ಇಲ್ಲದಿದ್ದರೆ ಅವುಗಳನ್ನು ವಶಕ್ಕೆ ಪಡೆದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವೆ ನಡೆಯಲಿದ್ದು, ಈ ಹಿನ್ನೆಲೆ ಕ್ಷೇತ್ರದಲ್ಲಿ ಭದ್ರತೆ ಹೆಚ್ಚಿಸಿ 10 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಹಿರಿಯ ಜಿಲ್ಲಾಧಿಕಾರಿಯೊಬ್ಬರು ಹೇಳಿದ್ದಾರೆ.

ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಮತದಾರರಿಗೆ ಹಣ, ವಸ್ತು ಹಂಚುವುದು ಅಪರಾಧವಾಗಿದೆ. ಎಂಸಿಸಿಯನ್ನು ಅನುಸರಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಾರ್ವಜನಿಕರು MCC ಯ ಯಾವುದೇ ಉಲ್ಲಂಘನೆಯನ್ನು ಕಂಡಲ್ಲಿ ದೂರುಗಳನ್ನು ಸಲ್ಲಿಸಬೇಕು ಅಥವಾ ದೂರುಗಳನ್ನು ಸಲ್ಲಿಸಲು cVIGIL ಅಪ್ಲಿಕೇಶನ್ ಅನ್ನು ಬಳಸಬೇಕು. ಸಾರ್ವಜನಿಕ ಬೆಂಬಲವಿಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT