ಸಂಗ್ರಹ ಚಿತ್ರ 
ರಾಜ್ಯ

ರಾಂಪುರ-ಬಸವನ ಕೆರೆ ನೀರು ಕಲುಷಿತ: ಸಾವಿರಾರು ಮೀನುಗಳು ಸಾವು

ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿದ್ದು, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ಸಾರ್ವಜನಿಕರು ಅಧಿಕಾರಿಗಳ ದುರ್ನಡತೆಯ ಕಂಡು ಹಿಡಿಶಾಪ ಹಾಕಿದರು.

ಬೆಂಗಳೂರು: ನಗರದ ರಾಂಪುರ ಹಾಗೂ ಬಸವನ ಕೆರೆಗೆ ಕಲುಷಿತ ನೀರು ಸೇರಿದ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿದೆ.

ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿದ್ದು, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ಸಾರ್ವಜನಿಕರು ಅಧಿಕಾರಿಗಳ ದುರ್ನಡತೆಯ ಕಂಡು ಹಿಡಿಶಾಪ ಹಾಕಿದರು.

ಕಲ್ಕೆರೆ ಸೇರಿದಂತೆ ಮೇಲ್ಭಾಗದ ಕೆರೆಗಳಿಂದ ಮಾಲಿನ್ಯಕಾರಕಗಳು ರಾಂಪುರ ಕೆರೆಗೆ ಸೇರಿವೆ, ಇದರ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಅದೇ ರೀತಿ ಬಸವನಪುರ ಕೆರೆ ನೀರೂ ಕಲುಷಿತಗೊಂಡು ನೂರಾರು ಮೀನುಗಳು ಸತ್ತಿವೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಎರಡೂ ಕೆರೆಗಳ ನೀರು ಹಾಗೂ ಸತ್ತ ಮೀನುಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೆರೆ ಸ್ವಚ್ಛತೆಗೆ ಕಾರ್ಮಿಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೆರೆ ವಿಭಾಗದ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ (ಮಹದೇವಪುರ ವಲಯ), ಭೂಪ್ರದಾ ಮಾತನಾಡಿ, ರಾಂಪುರ ಕೆರೆಯು ಹೆಬ್ಬಾಳದ ಕೆಳಭಾಗದಲ್ಲಿದೆ. ಉತ್ತರ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ, ಮಾಲಿನ್ಯಕಾರಕಗಳು ಕೆರೆ ಸೇರಿದೆ. ಇದರ ಪರಿಣಾಮ ಮೀನುಗಳು ಸಾವನ್ನಪ್ಪಿವೆ ಎಂದು ಹೇಳಿದ್ದಾರೆ.

ಬಸವನಪುರ ಕೆರೆಯಲ್ಲಿಯೂ ಮೀನುಗಳು ಸಾವನ್ನಪ್ಪಿರುವುದು ಗಮನಕ್ಕೆ ಬಂದಿದೆ. ಕೆರೆಯ ಬದಿಯಲ್ಲಿ ಸುಮಾರು 100 ಮೀಟರ್ ಚರಂಡಿ ಪೈಪ್ ಸಂಪರ್ಕ ಕಾಮಗಾರಿ ಇನ್ನೂ ಬಾಕಿ ಇದ್ದು, ನೆಲದಡಿ ಬಂಡೆಗಳಿರುವ ಕಾರಣ ಒಳಚರಂಡಿ ಮಾರ್ಗದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT