ಮೆಟ್ರೋ ರೈಲಿನಲ್ಲಿ ಸಂಚರಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ 
ರಾಜ್ಯ

2026ರ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೊ ರೈಲು ಸೇವೆ: ಡಿ ಕೆ ಶಿವಕುಮಾರ್

ಮೊದಲ ಹಾಗೂ ಎರಡನೇ ಹಂತದ ಮೆಟ್ರೋ ಮಾರ್ಗವನ್ನು ಪೂರ್ಣಗೊಳಿಸಿದ್ದು, ಮೂರನೇ ಹಂತದ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೊಸ ರೈಲುಗಳಿಗಾಗಿ ರಾಜ್ಯ ಸರ್ಕಾರ ಈಗಾಗಲೇ ರೂ. 1,130 ಕೋಟಿ

ಬೆಂಗಳೂರು: 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬುಧವಾರ ಹೇಳಿದರು. ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದ್ದು, 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದರು.

ಯಶವಂತಪುರ ಮೆಟ್ರೋ ನಿಲ್ದಾಣದಿಂದ ನಾಗಸಂದ್ರ- ಮಾದಾವರ ಮಾರ್ಗದಲ್ಲಿ ಡಿಕೆ ಶಿವಕುಮಾರ್ ಪರೀಕ್ಷಾ ಸಂಚಾರ ನಡೆಸಿದರು. ಇವರೊಂದಿಗೆ ಸಂಸದ ತೇಜಸ್ವಿ ಸೂರ್ಯ,ಶಾಸಕ ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

ಮೊದಲ ಹಾಗೂ ಎರಡನೇ ಹಂತದ ಮೆಟ್ರೋ ಮಾರ್ಗವನ್ನು ಪೂರ್ಣಗೊಳಿಸಿದ್ದು, ಮೂರನೇ ಹಂತದ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೊಸ ರೈಲುಗಳಿಗಾಗಿ ರಾಜ್ಯ ಸರ್ಕಾರ ಈಗಾಗಲೇ ರೂ. 1,130 ಕೋಟಿ ಪಾವತಿಸಿದೆ ಎಂದು ತಿಳಿಸಿದರು.

ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಅಂಡರ್‌ಪಾಸ್ ನಿರ್ಮಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಜೊತೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಮಂಜುನಾಥನಗರ ಮೆಟ್ರೊ ನಿಲ್ದಾಣದಲ್ಲಿ ಪಾದಚಾರಿ ಸ್ಕೈವಾಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಯಶವಂತಪುರ ರೈಲು ನಿಲ್ದಾಣದಲ್ಲಿ ಜಂಟಿಯಾಗಿ ಪಾದಚಾರಿ ಮಾರ್ಗ ನಿರ್ಮಿಸಲು ಭಾರತೀಯ ರೈಲ್ವೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

NHAI ಸಹಯೋಗದಲ್ಲಿ ಚಿಕ್ಕಬಿದರಕಲ್ಲು ಅಂಡರ್‌ಪಾಸ್‌ ಅಭಿವೃದ್ಧಿಪಡಿಸಲು ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಮಾದಾವರ ಮೆಟ್ರೊ ನಿಲ್ದಾಣದಲ್ಲಿ ಅಂಡರ್‌ಪಾಸ್‌ ನಿರ್ಮಿಸಲು ಚರ್ಚಿಸುತ್ತಿದ್ದೇವೆ. ತುಮಕೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರು ತಮ್ಮ ವಾಹನಗಳನ್ನು ಬಿಇಐಸಿ ಮೈದಾನದಲ್ಲಿ ನಿಲ್ಲಿಸಿ ಮೆಟ್ರೋದಲ್ಲಿ ಸಂಚರಿಸಬಹುದು,ಇದರಿಂದ ದಟ್ಟಣೆಯನ್ನು ತಪ್ಪಿಸಬಹುದು ಎಂದರು.

ನಮ್ಮ ಮೆಟ್ರೋ ಗ್ರೀನ್ ಲೈನ್‌ನ ನಾಗಸಂದ್ರದಿಂದ ಮಾದಾವರವರೆಗೆ 3.14 ಕಿಮೀ ವಿಸ್ತರಿತ ಮಾರ್ಗವನ್ನು ನಾಳೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಪ್ರಸ್ತುತ ಹಸಿರು ಮಾರ್ಗವು 33.46 ಕಿಮೀ ಮತ್ತು ನೇರಳೆ ಮಾರ್ಗ 40.5 ಕಿಮೀ ವ್ಯಾಪಿಸಿದೆ .ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಹೊಂದಿದ್ದು, ಮೆಟ್ರೋ ಸೇವೆಯು ನಗರದ ನಿವಾಸಿಗಳಿಗೆ ಪ್ರಯೋಜನಕಾರಿಯಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT