ಅಮಿತ್ ಕುಮಾರ್ 
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು

ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ

ಬೆಂಗಳೂರು: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಛತ್ತೀಸಗಡ ಮೂಲದ ಅಮಿತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ತಮಿಳುನಾಡಿನ ಗೆಳೆಯ ಸಲಾಮ್ ಖಾನ್ ಜೊತೆಗೆ ಹೋಗಿದ್ದರು.

ರಜೆ ಇದ್ದ ಕಾರಣ ಇವರಿಬ್ಬರು ಪ್ರವಾಸ ಕೈಗೊಂಡಿದ್ದರು. 120 ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಸಲಾಂ ಖಾನ್ ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT