ಅಮಿತ್ ಕುಮಾರ್ 
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು

ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ

ಬೆಂಗಳೂರು: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಛತ್ತೀಸಗಡ ಮೂಲದ ಅಮಿತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ತಮಿಳುನಾಡಿನ ಗೆಳೆಯ ಸಲಾಮ್ ಖಾನ್ ಜೊತೆಗೆ ಹೋಗಿದ್ದರು.

ರಜೆ ಇದ್ದ ಕಾರಣ ಇವರಿಬ್ಬರು ಪ್ರವಾಸ ಕೈಗೊಂಡಿದ್ದರು. 120 ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಸಲಾಂ ಖಾನ್ ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT