ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  online desk
ರಾಜ್ಯ

FIR ರದ್ದುಗೊಳಿಸಲು ಕೋರಿ ಕೇಂದ್ರ ಸಚಿವ HD ಕುಮಾರಸ್ವಾಮಿ ಹೈಕೋರ್ಟ್ ಮೊರೆ

ಕುಮಾರಸ್ವಾಮಿ ಮತ್ತು ಅವರ ಸಂಗಡಿಗರು ಸಲ್ಲಿಸಿರುವ ಅರ್ಜಿಯಲ್ಲಿ, ಪೊಲೀಸ್ ಮಹಾನಿರೀಕ್ಷಕ ಎಂ.ಚಂದ್ರಶೇಖರ್ ಅವರ ದೂರು "ದುರುಪಯೋಗ" ಮತ್ತು "ರಾಜಕೀಯ ಉದ್ದೇಶದಿಂದ" ಕೂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ವಜಾಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಹಚರ ಸುರೇಶ್ ಬಾಬು ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.

ಕುಮಾರಸ್ವಾಮಿ ಮತ್ತು ಅವರ ಸಂಗಡಿಗರು ಸಲ್ಲಿಸಿರುವ ಅರ್ಜಿಯಲ್ಲಿ, ಪೊಲೀಸ್ ಮಹಾನಿರೀಕ್ಷಕ ಎಂ.ಚಂದ್ರಶೇಖರ್ ಅವರ ದೂರು "ದುರುಪಯೋಗ" ಮತ್ತು "ರಾಜಕೀಯ ಉದ್ದೇಶದಿಂದ" ಕೂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಕುಮಾರಸ್ವಾಮಿ ಅವರು ಸರ್ಕಾರಿ ನೌಕರನಿಗೆ ಕರ್ತವ್ಯ ನಿರ್ವಹಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಆರೋಪಿಯಾಗಿರುವ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ನೇತೃತ್ವವನ್ನು ವಹಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.

ಕುಮಾರಸ್ವಾಮಿ 2006 ರಿಂದ 2008 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನು ಉಲ್ಲಂಘಿಸಿ ಬಳ್ಳಾರಿ ಜಿಲ್ಲೆಯ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ (ಎಸ್‌ಎಸ್‌ವಿಎಂ) ಗೆ 550 ಎಕರೆ ಗಣಿಗಾರಿಕೆ ಗುತ್ತಿಗೆಯನ್ನು ಅಕ್ರಮವಾಗಿ ಅನುಮೋದಿಸಿದ್ದಾರೆ ಎಂಬ ಆರೋಪಕ್ಕೆ ಈ ತನಿಖೆ ಸಂಬಂಧಿಸಿದೆ.

"ಎಸ್‌ಐಟಿ, ತನಿಖಾ ವರದಿಯನ್ನು ಸಿದ್ಧಪಡಿಸಿದ ನಂತರ ಮತ್ತು ಆರೋಪಿಯನ್ನು (ಕುಮಾರಸ್ವಾಮಿ) ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳು ಮತ್ತು ವಸ್ತುಗಳನ್ನು ಕಂಡುಹಿಡಿದ ನಂತರ, 21/11/2023 ರಂದು ಆರೋಪಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ಕರ್ನಾಟಕ ರಾಜ್ಯಪಾಲರಾದ ಘನತೆವೆತ್ತ ಅವರಿಗೆ ಪತ್ರ ಬರೆದಿತ್ತು". ಎಂದು ಚಂದ್ರಶೇಖರ್ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT