ಬೀದರ್ ಕೋಟೆ PTI
ರಾಜ್ಯ

ಐತಿಹಾಸಿಕ ಬೀದರ್ ಕೋಟೆ ಮೇಲೆ ವಕ್ಫ್ ಮಂಡಳಿ ಕಣ್ಣು: 17 ಸ್ಮಾರಕಗಳು ತನ್ನ ಆಸ್ತಿ ಎಂದು ಗುರುತಿಸಿದ Waqf!

ಕೋಟೆಯನ್ನು ನಿರ್ವಹಿಸುತ್ತಿರುವ ಭಾರತೀಯ ಪುರಾತತ್ವ ಇಲಾಖೆಗೆ ಈ ಬಗ್ಗೆ ತಿಳಿದಿಲ್ಲ. ಬೀದರ್ ಕೋಟೆ ಆವರಣದಲ್ಲಿರುವ 60 ಆಸ್ತಿಗಳ ಪೈಕಿ 17 ಆಸ್ತಿಗಳು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಮುಗಿಯುವ ಸೂಚನೆಗಳು ಕಾಣುತ್ತಿಲ್ಲ. ರೈತರ ಜಮೀನು, ಮಠದ ಜಮೀನುಗಳನ್ನು ತನ್ನದೆಂದು ಗುರುತಿಸಿದ್ದ ವಕ್ಫ್ ಮಂಡಳಿಯೂ ಇದೀಗ ಐತಿಹಾಸಿಕ ಬೀದರ್ ಕೋಟೆ ಮೇಲೆ ಕಣ್ಣಾಕಿದ್ದು ಕೋಟೆಯೊಳಗಿನ 17 ಸ್ಮಾರಕಗಳು ತನ್ನ ಆಸ್ತಿ ಎಂದು ಗುರುತಿಸಿರುವುದಾಗಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಈ ಸ್ಮಾರಕಗಳು ಬೀದರ್ ಜಿಲ್ಲಾ ಕೇಂದ್ರ ಪಟ್ಟಣದಲ್ಲಿರುವ ಕೋಟೆಯ ಪ್ರಮುಖ ಹೆಗ್ಗುರುತುಗಳಲ್ಲಿ ಸೇರಿವೆ. ಕೋಟೆಯನ್ನು ನಿರ್ವಹಿಸುತ್ತಿರುವ ಭಾರತೀಯ ಪುರಾತತ್ವ ಇಲಾಖೆಗೆ ಈ ಬಗ್ಗೆ ತಿಳಿದಿಲ್ಲ. ಬೀದರ್ ಕೋಟೆ ಆವರಣದಲ್ಲಿರುವ 60 ಆಸ್ತಿಗಳ ಪೈಕಿ 17 ಆಸ್ತಿಗಳು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಮೂಲಗಳು ತಿಳಿಸಿವೆ.

ವಕ್ಫ್ ಗುರುತಿಸಿರುವ ಪಟ್ಟಿಯಲ್ಲಿ ಹೆಸರಾಂತ 16 ಸ್ತಂಭಗಳು ಮಸೀದಿ, ವಿವಿಧ ಬಹಮನಿ ಆಡಳಿತಗಾರರ 14 ಸಮಾಧಿಗಳು ಮತ್ತು ಅಹ್ಮದ್ ಶಾ-IV, ಅಹ್ಮದ್ ಶಾ ಅವರ ಪತ್ನಿ, ಅಲ್ಲಾವುದ್ದೀನ್, ಹಸನ್ ಖಾನ್, ಮೊಹಮ್ಮದ್ ಶಾ-III, ನಿಜಾಮ್, ಸುಲ್ತಾನ್ ಅಹ್ಮದ್ ಶಾ ವಾಲಿ ಮತ್ತು ಸುಲ್ತಾನ್ ಮಹಮೂದ್ ಷಾ ಸೇರಿದಂತೆ ಅವರ ಕುಟುಂಬದ ಸದಸ್ಯರ ಸಮಾಧಿಗಳನ್ನು ಸೇರಿವೆ.

ಈ ಸಂಬಂಧ ಎಎಸ್‌ಐಗೆ ನೋಟಿಸ್‌ಗಳನ್ನು ನೀಡಲಾಗಿಲ್ಲ ಎಂದು ಅನಾಮಧೇಯತೆಯ ಷರತ್ತಿನ ಮೇಲೆ ವಕ್ಫ್ ಮಂಡಳಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲವು ದಶಕಗಳಿಂದ ಐತಿಹಾಸಿಕ ಸ್ಮಾರಕಗಳ ನಿರ್ವಹಣೆ ಹಾಗೂ ರಕ್ಷಕರಾಗಿರುವ ಎಎಸ್‌ಐಗೆ ಮಂಡಳಿಯು ನೋಟಿಸ್ ಜಾರಿ ಮಾಡುವುದು ಹೇಗೆ? ವಕ್ಫ್ ಬೋರ್ಡ್ ಹೆಸರಿನಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದ್ದು, ಇದರಿಂದ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಆರೋಪಿಸಿದರು. ವಿವಾದವು ಪ್ರಾರಂಭವಾದಾಗಿನಿಂದ, ನಾವು ಎಲ್ಲಾ ನೋಟಿಸ್‌ಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಏಕೆಂದರೆ ಬಹಳ ಸಮಯದಿಂದ ಭೂಮಿಯಲ್ಲಿ ಕುಳಿತಿರುವ ಜನರನ್ನು ಹೊರಹಾಕುವುದು ಅನ್ಯಾಯ ಮತ್ತು ಕಾನೂನುಬಾಹಿರವಾಗಿದೆ ಎಂದು ಅಧಿಕಾರಿ ಸೇರಿಸಿದರು.

ಏತನ್ಮಧ್ಯೆ, ವಕ್ಫ್ (ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7ರಂದು ಕರ್ನಾಟಕದ ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ ವಕ್ಫ್ ಮಂಡಳಿಯ ಕ್ರಮದಿಂದ ಹಾನಿಗೊಳಗಾದ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ವಿಜಯಪುರದಲ್ಲಿ ವಕ್ಫ್ ಮಂಡಳಿಯೂ ರೈತರ ಜಮೀನನ್ನು ಕಬಳಿಸುತ್ತಿದೆ. ಈ ಸಂಬಂಧ ರೈತರ ಜೊತೆ ಚರ್ಚಿಸಲು ರಾಜ್ಯಕ್ಕೆ ಬರುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ ಕೆಲವು ದಿನಗಳ ನಂತರ ಪ್ರತಿಕ್ರಿಯೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT